Advertisement

ತೋಡು ದಾಟುವ ವೇಳೆ ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

06:37 PM Jul 28, 2022 | Team Udayavani |

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಅಂಗಡಿಗೆ ಹೋಗಿ ವಾಪಸ್‌ ಮನೆಗೆ ಬರುವ ವೇಳೆ ಮನೆಯ ಬಳಿ ತೋಡು ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜು. 27ರ ರಾತ್ರಿ ಇಂದಬೆಟ್ಟುನಲ್ಲಿ ನಡೆದಿದೆ.

Advertisement

ಇಂದಬೆಟ್ಟು ಗ್ರಾಮದ ಬರಮೇಲು ನಿವಾಸಿ ಪೂವಪ್ಪ(54) ಅವರು ಬುಧವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಮನೆಯಿಂದ ಕಿಲ್ಲೂರು ಅಂಗಡಿ ಹೋಗಿ ವಾಪಸ್‌ ತೆರಳುವ ವೇಳೆ ಮನೆಯ ತೋಟದ ತೋಡು ದಾಟುವ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಮನೆಯವರು ಪೂವಪ್ಪ ಅವರು ಸಂಜೆಯಾದರೂ ವಾಪಸ್‌ ಬರದೆ ಇದ್ದಾಗ ಹುಡುಕಾಟ ನಡೆಸಿದ್ದಾರೆ.

ರಾತ್ರಿ ಸುಮಾರು 9 ಗಂಟೆಗೆ ತೋಟದ ತೋಡಿನಲ್ಲಿ ಬಿದ್ದು ಸಾವನ್ನಪ್ಪಿರುವುದು ತಿಳಿದುಬಂದಿದೆ. ಬುಧವಾರ ಮಳೆ ಇದ್ದ ಕಾರಣ ತೋಡಿನಲ್ಲಿ ನೀರು ಜಾಸ್ತಿ ಇದ್ದು, ಹೀಗಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಮನೆಯವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next