Advertisement

Ghaziabad; ಜಗಳವಾಡಿ ಪತ್ನಿಯನ್ನು ಮೂರನೇ ಮಹಡಿಯಿಂದ ತಳ್ಳಿದ ಭೂಪ; ಬಂಧನ

10:24 AM Jan 28, 2024 | Team Udayavani |

ಗಾಜಿಯಾಬಾದ್: ಪತ್ನಿಯೊಂದಿಗೆ ಜಗಳವಾಡಿದ ವ್ಯಕ್ತಿಯೋರ್ವ ಆಕೆಯನ್ನು ಮೂರನೇ ಮಹಡಿಯಿಂದ ಕೆಳಕ್ಕೆ ತಳ್ಳಿದ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯಲ್ಲಿ ಸಾವನ್ನಪ್ಪಿದ್ದಾಳೆ.

Advertisement

ಗಾಜಿಯಾಬಾದ್ ನ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಪೊಲೀಸರು ಆರೋಪಿ ಪತಿ ವಿಕಾಸ್ ಕುಮಾರ್ ನನ್ನು ಬಂಧಿಸಿದ್ದಾರೆ.

ಪಾರ್ಕಿಂಗ್ ಗುತ್ತಿಗೆದಾರ ಕುಮಾರ್ ಅವರು ಮದ್ಯದ ಅಮಲಿನಲ್ಲಿ ಮನೆಗೆ ತಲುಪಿದ್ದ. 30 ರ ಹರೆಯದ ಪತ್ನಿ ಶಾಲು ಅವರೊಂದಿಗೆ ತೀವ್ರ ಜಗಳವಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

“ಆಕೆಯನ್ನು ಮೂರನೇ ಮಹಡಿಯಿಂದ ಕೆಳಕ್ಕೆಸೆದ ಬಳಿಕ ಪತಿ ಕುಮಾರ್ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದ. ಅಲ್ಲಿ ವೈದ್ಯರು ಆಕೆ ಮೃತಳಾಗಿದ್ದಾಳೆ ಎಂದು ಘೋಷಿಸಿದರು” ಎಂದು ಎಸಿಪಿ ಅಭಿಷೇಕ್ ಶ್ರಿವಾಸ್ತವ್ ಹೇಳಿದರು.

ಪೊಲೀಸರಿಗೆ ಮಾಹಿತಿ ನೀಡುವಂತೆ ವೈದ್ಯರು ಸಿಬ್ಬಂದಿಯನ್ನು ಕೇಳಿದಾಗ ಕುಮಾರ್ ಆಸ್ಪತ್ರೆಯಿಂದ ಪರಾರಿಯಾಗಿದ್ದರು ಎಂದು ವರದಿಯಾಗಿದೆ. ಕೆಲವು ಗಂಟೆಗಳ ನಂತರ ಆತನನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next