Advertisement

ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವಾಗ ನಿತ್ರಾಣಗೊಂಡ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ  

01:13 PM Oct 31, 2022 | Team Udayavani |

ಬಂಟ್ವಾಳ: ತಾಲೂಕಿನ ಗಾಣದಪಡ್ಪು ಎಂಬಲ್ಲಿ ಶ್ರೀ. ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ ಕಾರ್ಯ ಮಾಡುವ ವೇಳೆ ನಿತ್ರಾಣಗೊಂಡು ಬಾವಿಯಿಂದ ಮೇಲೆ ಬರಲು ಆಗದಿದ್ದಾಗ ,ಬಂಟ್ವಾಳ ಅಗ್ನಿಶಾಮಕ ಠಾಣೆಯ ತಂಡ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ನಡೆದಿದೆ.

Advertisement

ಅಗ್ನಿಶಾಮಕ ಸಿಬ್ಬಂದಿ ನಂದಪ್ಪ ನಾಯ್ಕೋಡಿಯರವರು ಬಾವಿಗೆ ಇಳಿದು ಶ್ರೀ.ಬಿ.ವಾಸು ಪೂಜಾರಿಯವರನ್ನು  ಯಾವುದೇ ಪ್ರಾಣಾಪಾಯ ಇಲ್ಲದೆ ಜೀವಂತವಾಗಿ ಮೇಲಕ್ಕೆತ್ತಿ ರಕ್ಷಿಸಲಾಯಿತು.

ಬಂಟ್ವಾಳ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಯು.ರವೀಂದ್ರ, ಸಿಬ್ಬಂದಿ ಪುರುಷೋತ್ತಮ, ರೋಹಿತ್, ರುಕ್ಕಯ್ಯ ಅಮೀನ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಮತ್ತಿತರರು ಕಾರ್ಯಚರಣೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next