Advertisement

ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆಗೈದಿದ್ದಾತನಿಗೆ ಜೀವಾವಧಿ ಶಿಕ್ಷೆ

09:41 PM Nov 26, 2020 | mahesh |

ಚಾಮರಾಜನಗರ: ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Advertisement

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಆನಂದ ಕುಮಾರ ಶಿಕ್ಷೆಗೊಳಗಾದ ವ್ಯಕ್ತಿ. ಈತ ಅದೇ ಗ್ರಾಮದ ರತ್ನಮ್ಮ ಎಂಬಾಕೆಯ ಪತಿ ರಾಮಚಂದ್ರ ಅವರಿಂದ 10 ಸಾವಿರ ರೂ. ಸಾಲ ಪಡೆದಿದ್ದ. ಸಾಲದ ಹಣವನ್ನು ರತ್ನಮ್ಮಳಿಗೆ ವಾಪಸ್ ನೀಡಲು ಹೋದಾಗ ಇದಕ್ಕೆ ಬಡ್ಡಿ ಸೇರಿಸಿ ಹೆಚ್ಚಿನ ಮೊತ್ತ ನೀಡಬೇಕೆಂದು ರತ್ನಮ್ಮ ಒತ್ತಾಯಿಸಿದ್ದರು. ಆಗ ಇಬ್ಬರಿಗೂ ಜಗಳವಾಗಿತ್ತು.

ಇದೇ ದ್ವೇಷದಿಂದ 2016ರ ಫೆ. 13ರಂದು ಸಂಜೆ 4.30ರಲ್ಲಿ ರತ್ನಮ್ಮ ತೆರಕಣಾಂಬಿ ಯ ರಾಮಮಂದಿರದ ಬಳಿ ನಡೆದು ಹೋಗುತ್ತಿದ್ದಾಗ, ಸೈಕಲ್‌ನಲ್ಲಿ ಬಂದ ಆನಂದಕುಮಾರ ಸಾಲದ ಹಣ ಪಾವತಿ ಮಾಡಲು ಬಂದರೆ ಹೆಚ್ಚು ಹಣ ಕೇಳುತ್ತೀರಾ ಎಂದು ಅವಾಚ್ಯ ಶಬ್ದಗಳಿಂದ ಬೈದು ರತ್ನಮ್ಮಳ ಮೇಲೆ ಮಚ್ಚಿನಿಂದ ತೀವ್ರ ಹಲ್ಲೆ ಮಾಡಿದ್ದ. ಇದರಿಂದ ರತ್ನಮ್ಮ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಕೊಲೆ ಮಾಡಿರುವುದು ರುಜುವಾತಾಗಿದ್ದರಿಂದ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಧೀಶ ಸದಾಶಿವ ಸುಲ್ತಾನ್‌ಪುರಿ ಅವರು ಆನಂದನಿಗೆ ಜೀವಾವಧಿ ಶಿಕ್ಷೆ ಹಾಗೂ 6,500 ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next