Advertisement

ಕುಡಿಯಲು ಹಣ ನೀಡದ್ದಕ್ಕೆ ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ!

10:33 AM Mar 12, 2022 | Team Udayavani |

ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿಯೇ ಗರ್ಭಿಣಿ ಪತ್ನಿಗೆ ಡಿಸೇಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಜತೆಗೆ ಎರಡೂವರೆ ವರ್ಷದ ಮಗು ಮೇಲೂ ಹಲ್ಲೆ ನಡೆಸಿದ್ದಾನೆ.

Advertisement

ಹಳೇ ಬೈಯಪ್ಪನಹಳ್ಳಿ ನಿವಾಸಿ ಮೀನಾ (24) ಗಾಯಗೊಂಡ ಮಹಿಳೆ. ಈ ಸಂಬಂಧ ಆಕೆಯ 2ನೇ ಪತಿ ಬಾಬು(37)ನನ್ನು ಬಂಧಿಸಲಾಗಿದೆ.

ಮೀನಾ ಈ ಮೊದಲು ವಿಜಯಕಾಂತ್‌ ಎಂಬವರನ್ನು ಮದುವೆಯಾಗಿದ್ದು, ದಂಪತಿಗೆ ಮೂವರು ಹೆಣ್ಣು ಮಕ್ಕಳು ಇದ್ದರು. 6 ತಿಂಗಳ ಹಿಂದೆ ವಿಜಯಕಾಂತ್‌ ಮೃತಪಟ್ಟಿದ್ದರು. ಇನ್ನು ಬಾಬು ಮೊದಲ ಪತ್ನಿಯಿಂದ ದೂರವಾಗಿದ್ದು, ಒಬ್ಬನೆ ವಾಸಿಸುತ್ತಿದ್ದ. ಕೋರಿಯರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಕೂಲಿ ಕೆಲಸ ಮಾಡುವ ಮೀನಾ ಪರಿಚಯವಾಗಿದ್ದು, ಇಬ್ಬರು ಎರಡನೇ ಮದುವೆಯಾಗಿದ್ದಾರೆ. ಹೀಗಾಗಿ ಮೀನಾ ತನ್ನ ಮೂವರು ಮಕ್ಕಳನ್ನು ಹಾಸ್ಟೆಲ್‌ನಲ್ಲಿ ಇರಿಸಿದ್ದರು. ದಂಪತಿ ಹಳೇ ಬೈಯಪ್ಪನಹಳ್ಳಿಯಲ್ಲಿ ವಾಸವಾಗಿದ್ದರು.

ಇದನ್ನೂ ಓದಿ:ಮನೆ ಮೇಲೆ ದಾಳಿ ಮಾಡಲು ಬಂದ ಅರಣ್ಯಾಧಿಕಾರಿಗಳನ್ನು 2 ಗಂಟೆ ಕೂಡಿ ಹಾಕಿದ ಗ್ರಾಮಸ್ಥರು

ಈ ಮಧ್ಯೆ ಬಾಬು ಕಂಠ ಪೂರ್ತಿ ಮದ್ಯ ಸೇವಿಸಿ ನಿತ್ಯ ಜಗಳ ಮಾಡುತ್ತಿದ್ದ. ಜತೆಗೆ ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ. ಅದರಿಂದ ಬೇಸತ್ತ ಮೀನಾ, ಗರ್ಭಿಣಿಯಾಗಿದ್ದೇನೆ. ಇದೇ ರೀತಿ ಹಿಂಸೆ ಕೊಟ್ಟರೆ ಡಿಸೇಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದರು. ಗುರುವಾರ ಕೂಡ ದಂಪತಿ ನಡುವೆ ಗಲಾಟೆಯಾಗಿದೆ. ಆಗ ಕೋಪಗೊಂಡ ಆರೋಪಿ, ಯಾವಾಗಲೂ ಬೆಂಕಿ ಹಚ್ಚಿಕೊಂಡು ಸಾಯುತ್ತೇನೆ ಎಂದು ಹೇಳುತ್ತಿದೆ ಅಲ್ಲವೇ? ಇವತ್ತು ನಾನೇ ಬೆಂಕಿ ಹಚ್ಚುತ್ತೇನೆ ಎಂದು ಮನೆ ಯಲ್ಲಿದ್ದ ಡಿಸೇಲ್‌ ಸುರಿದು ಬೆಂಕಿ ಹಚ್ಚಿದ್ದಾನೆ.

Advertisement

ಗರ್ಭಿಣಿ ಆಗಿರುವ ಮೀನಾ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವೇಳೆ ಮೀನಾ ಅವರ ಮೊದಲ ಪತಿಯ ಮಗಳು ಮನೆಯಲ್ಲಿದ್ದು, ಆಕೆಗೂ ಆರೋಪಿ ಕಚ್ಚಿ ಗಾಯಗೊಳಿಸಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next