Advertisement

ಕಳ್ಳನೆಂದು ಶಂಕಿಸಿ ವ್ಯಕ್ತಿಯ ಹೊಡೆದು ಕೊಲೆ : ಐವರ ಬಂಧನ

05:01 PM May 26, 2023 | Team Udayavani |

ಮುಂಬಯಿ: ಉಪನಗರ ಬೊರಿವಲಿಯಲ್ಲಿ ಕಳ್ಳನೆಂದು ಶಂಕಿಸಿ 29 ವರ್ಷದ ಯುವಕನನ್ನು ಹೊಡೆದು ಕೊಂದ ಆರೋಪದ ಮೇಲೆ ಮುಂಬಯಿ ಪೊಲೀಸರು ಶುಕ್ರವಾರ ಐವರನ್ನು ಬಂಧಿಸಿದ್ದಾರೆ.

Advertisement

ಸ್ಥಳೀಯ ನಿವಾಸಿಗಳ ಗುಂಪೊಂದು ಬಲಿಯಾದ ಪ್ರವೀಣ್‌ ಶಾಂತಾರಾಮ್‌ ಲಹಾನೆ ಅವರ ಮೇಲೆ ಗುರುವಾರ ಮುಂಜಾನೆ 1.15 ರ ಸುಮಾರಿಗೆ ಬೊರಿವಲಿ ಪೂರ್ವದ ಕಸ್ತೂರ್ಬಾ ಮಾರ್ಗ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಮ್ಮ ಪ್ರದೇಶದ ಮೂಲಕ ಹಾದುಹೋಗುವಾಗ ಕಳ್ಳನೆಂದು ಶಂಕಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸ್‌ ತಂಡ ಆತನನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು ಅಧಿಕಾರಿ ತಿಳಿಸಿದ್ದಾರೆ.

ಪ್ರಾಥಮಿಕ ಚಿಕಿತ್ಸೆಯ ನಂತರ ಆತನನ್ನು ಡಿಸಾcರ್ಜ್‌ ಮಾಡಿ ಪೊಲೀಸ್‌ ಠಾಣೆಗೆ ಕರೆತರಲಾಯಿತು. ಆದರೆ ಸ್ವಲ್ಪ ಸಮಯದ ನಂತರ ಅವರು ಅಸ್ವಸ್ಥತೆಯ ಬಗ್ಗೆ ದೂರು ನೀಡಿದ್ದರಿಂದ ಅವರನ್ನು ಮತ್ತೆ ಅದೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದರು ಎಂದು ಅವರು ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿ¨ªಾರೆ.

Advertisement

Udayavani is now on Telegram. Click here to join our channel and stay updated with the latest news.

Next