Advertisement

ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ… ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಕೃತ್ಯ

03:09 PM Jul 15, 2023 | Team Udayavani |

ಉತ್ತರ ಪ್ರದೇಶ: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ.

Advertisement

ಉತ್ತರ ಪ್ರದೇಶದ ಸೋನಭದ್ರಾದಲ್ಲಿ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಯ ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯ ವ್ಯಾಪಕವಾಗಿ ಪ್ರಸಾರವಾದ ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜುಲೈ 11 ರಂದು ಜಿಲ್ಲೆಯ ಜುಗೈಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಗೆಳೆಯರು ಮದ್ಯ ಸೇವಿಸಿದ ಬಳಿಕ ಜಗಳ ಮಾಡಿಕೊಂಡಿದ್ದಾರೆ ಈ ವೇಳೆ ಅಲ್ಲೇ ಕುಳಿತ್ತಿದ್ದ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಬಳಿಕ ಕಿವಿಯ ಮೇಲೆ ಮೂತ್ರ ವಿಸರ್ಜನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಅಲ್ಲೇ ಇದ್ದ ಒಬ್ಬರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಇಬ್ಬರು ಯುವಕರು ಮದ್ಯದ ನಶೆಯಲ್ಲಿರುವುದು ಗೊತ್ತಾಗಿದೆ. ದಲಿತ ಯುವಕನ ದೂರಿನ ಮೇಲೆ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಜೈಪುರ: ಹಳಿ ತಪ್ಪಿದ ಗೂಡ್ಸ್ ರೈಲು… 7 ರೈಲುಗಳ ಸಂಚಾರ ಸ್ಥಗಿತ

Advertisement
Advertisement

Udayavani is now on Telegram. Click here to join our channel and stay updated with the latest news.

Next