Advertisement

ನೀರಿನಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ: ರಕ್ಷಿಸಿದ ಸ್ಥಳೀಯರು

04:25 PM Jul 24, 2020 | keerthan |

ಕಲಬುರಗಿ: ತುಂಬಿ ಹರಿಯುತ್ತಿದ್ದ ಹಳ್ಳ‌ ದಾಟಲು ಹೋಗಿ ಕೊಡಗಳ ಮಾರುವ ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಸ್ಥಳೀಯರು ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಜಿಲ್ಲೆಯ ಆಳಂದ ತಾಲೂಕಿನ ಹಡಗಲಿ ಗ್ರಾಮದ ಬಳಿ ಘಟನೆ ನಡೆದಿದೆ. ಬೈಕ್ ಮೇಲೆ ಕೊಡಗಳ ಮಾರಾಟ ಮಾಡುತ್ತಿದ್ದ ವ್ಯಕ್ತಿ ತುಂಬಿ ಹರಿಯುತ್ತಿದ್ದ ಹಳ್ಳದ ಸೇತುವೆ‌‌ಯನ್ನು ದಾಟುವ ದುಸ್ಸಾಹಸ ಮಾಡಿದ್ದಾನೆ.

ಸೇತುವ ನಡುವೆ ಹೋಗುತ್ತಿದ್ದಂತೆ‌ ನೀರಿನ ಸೆಳೆತ ಹೆಚ್ಚಾಗಿ ಬೈಕ್ ಮತ್ತು ಕೊಡಗಳ ಸಮೇತ ತಾನೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಇದನ್ನು ಕಂಡ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ.‌ ಹಡಗಲಿಯಿಂದ ಯಳಸಂಗಿ ಗ್ರಾಮಕ್ಕೆ ಈ ಸೇತುವೆ ಸಂಪರ್ಕ ಕಲ್ಪಿಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next