Advertisement

ಸಚಿವ ಸುಧಾಕರ್ ಬಳಿಗೆ ಚಾಕು ಇಟ್ಟುಕೊಂಡು ಬಂದ ಯುವಕ ಪೊಲೀಸ್ ವಶಕ್ಕೆ

07:24 PM Jul 29, 2022 | Team Udayavani |

ಗುಡಿಬಂಡೆ: ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ| ಕೆ.ಸುಧಾಕರ್ ಕಾರಿನ ಬಳಿಗೆ ಚಾಕು ಇಟ್ಟುಕೊಂಡು ಬಂದ ಯುವಕನನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಂಧನ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಜ್ವಲ ಭಾರತ, ಉಜ್ವಲ ಭವಿಷ್ಯ ಕಾರ್ಯಕ್ರಮ ಮುಗಿಸಿ ಸಚಿವರು ವಾಪಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೀಚಗಾನಹಳ್ಳಿ ಗ್ರಾಮದ ಯುವಕ ಗಂಗಪ್ಪ ಎಂಬುವನು ಚಾಕು ಇಟ್ಟುಕೊಂಡು ಕಾರಿನ ಬಳಿಗೆ ಹೋಗಿದ್ದು, ಅಲ್ಲಿಯೇ ಇದ್ದ ಪೊಲೀಸ್ ಪೇದೆ ಕರಿಬಾಬು ಅತನ ಅನುಮಾನಾಸ್ಪದ ವರ್ತನೆಯನ್ನು ಗಮನಿಸಿ ತಡೆದಿದ್ದಾರೆ.

ಅತನ ಬಳಿ ಚಾಕು ಇರುವುದನ್ನು ಗಮನಿಸಿ ತಕ್ಷಣ ಅಲ್ಲಿಂದ ಹೊರದಬ್ಬಿ ಇತರ ಪೊಲೀಸರ ಸಹಾಯದಿಂದ ಮುಂದೆ ಆಗಬಹುದಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಪೊಲೀಸರು ಆತನನ್ನು ಕರೆದೊಯ್ದಿದ್ದು, ಸತ್ಯಾಂಶ ವಿಚಾರಣೆ ನಂತರವೇ ಹೊರಬರಬೇಕಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next