Advertisement

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು!

01:37 PM Jun 18, 2021 | Team Udayavani |

ಲಕ್ನೋ: 2015ರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಬಹಿರಂಗವಾಗಿ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ದೇವಸಿಶ್ ಆಚಾರ್ಯ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮಬಂಗಾಳದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

ಗುರುವಾರ ಕೆಲವು ಅಪರಿಚಿತ ವ್ಯಕ್ತಿಗಳು ಆಚಾರ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಬಳಿಕ ತಪಾಸಣೆ ನಡೆಸಿದ ವೈದ್ಯರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದರು ಎಂದು ವರದಿ ವಿವರಿಸಿದೆ.

ಹಲವು ಗಾಯಗಳಿಂದ ಜರ್ಜರಿತರಾಗಿದ್ದ ದೇವಸಿಶ್ ಆಚಾರ್ಯ ಅವರನ್ನು ಗುರುವಾರ ಮುಂಜಾನೆ ಮಿಡ್ನಾಪುರದ ತಮ್ಲುಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ದಾಖಲೆಯ ಪ್ರಕಾರ, ಗುರುವಾರ ನಸುಕಿನ 4.10ರ ಹೊತ್ತಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆಚಾರ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಕೂಡಲೇ ಹೊರಟು ಹೋಗಿರುವುದಾಗಿ ತಿಳಿಸಿದೆ.

ಗುರುವಾರ(ಜೂನ್ 17) ಮಧ್ಯಾಹ್ನ ಆಚಾರ್ಯ ಅವರು ನಿಧನರಾಗಿದ್ದರು. ಆದರೆ ನಿಗೂಢವಾಗಿ ಸಾವನ್ನಪ್ಪಿರುವ ಆಚಾರ್ಯ ಅವರ ಸಾವು ವ್ಯವಸ್ಥಿತ ಕೊಲೆ ಎಂದು ಕುಟುಂಬ ಸದಸ್ಯರು ಆರೋಪಿಸಿರುವುದಾಗಿ ವರದಿ ತಿಳಿಸಿದೆ.

Advertisement

ದೇವಸಿಶ್ ಅವರು 2020ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಆದರೆ ಇದೀಗ ನಿಗೂಢವಾಗಿ ಸಾವನ್ನಪ್ಪಿರುವ ಆಚಾರ್ಯ ಅವರ ಸಾವಿನ ಪ್ರಕರಣದ ಬಗ್ಗೆ ಬಿಜೆಪಿ ಗಂಭೀರವಾಗಿ ಪ್ರಶ್ನಿಸಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next