Advertisement

Sagara ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

08:32 PM Sep 15, 2023 | Team Udayavani |

ಸಾಗರ: ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ರಾಣೆಬೆನ್ನೂರು ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿ, ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Advertisement

ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ ಇಮ್ತಿಯಾಜ್ ದನದ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next