Advertisement

ಪತ್ನಿ, ಮಕ್ಕಳನ್ನು ಸ್ಫೋಟಿಸಿ ಕೊಂದ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ!

12:19 PM May 06, 2022 | Team Udayavani |

ತಿರುವನಂತಪುರಂ: ಸ್ಫೋಟಕ ಬಳಸಿ ಪತ್ನಿ ಮತ್ತು ಮಕ್ಕಳನ್ನು ಹತ್ಯೆಗೈದ ನಂತರ ಪತಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಭೀಕರ ಘಟನೆ ಕೇರಳದ ಮಲಪ್ಪುರಂನಲ್ಲಿ ಗುರುವಾರ (ಮೇ 05) ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಏನಿದು ಘಟನೆ:

ಮೊಹಮ್ಮದ್ (52ವರ್ಷ) ಎಂಬಾತ ಆಟೋ ರಿಕ್ಷಾ ಚಾಲಕನಾಗಿದ್ದು, ಮಲಪ್ಪುರಂನಲ್ಲಿರುವ ಮನೆಗೆ ಬಂದಿದ್ದ. ಮನೆಯಲ್ಲಿದ್ದ ಪತ್ನಿ ಮತ್ತು ಮಕ್ಕಳನ್ನು ಕರೆದು ಆಟೋ ರಿಕ್ಷಾದಲ್ಲಿ ಕುಳಿತುಕೊಳ್ಳುವಂತೆ ಹೇಳಿದ್ದ. ನಂತರ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ್ದು, ರಿಕ್ಷಾದೊಳಗೆ ಸ್ಫೋಟಕ ಇಟ್ಟಿದ್ದ ಪರಿಣಾಮ ಅದು ಸ್ಫೋಟಗೊಂಡು ಪತ್ನಿ ಜಾಸ್ಮಿನ್ (37) ಹಾಗೂ 11 ವರ್ಷದ ಮಗಳು ಸಾವನ್ನಪ್ಪಿದ್ದರು. ನಂತರ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಬಾವಿ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಎಂದು ಮನೋರಮಾ ವರದಿ ತಿಳಿಸಿದೆ.

ಇದನ್ನೂ ಓದಿ:ಪಿಎಸ್ಐ ಅಕ್ರಮದಲ್ಲಿ ಅಶ್ವಥನಾರಾಯಣ್ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ಸಚಿವ ಗೋಪಾಲಯ್ಯ ಸವಾಲು

ಘಟನೆಯಲ್ಲಿ ಐದು ವರ್ಷದ ಮಗು ಬೆಂಕಿ ಮತ್ತು ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ವಿವರಿಸಿದೆ.

Advertisement

ಆರಂಭಿಕ ತನಿಖೆಯಲ್ಲಿ ರಿಕ್ಷಾದೊಳಗೆ ಸ್ಫೋಟಕ ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೊಹಮ್ಮದ್ ಪೋಕ್ಸೋ ಆರೋಪಿಯಾಗಿದ್ದು, ಈತ ಪತ್ನಿ ಮತ್ತು ಮಕ್ಕಳನ್ನು ಕೊಂದಿರುವ ಹಿಂದಿನ ಉದ್ದೇಶ ಇನ್ನೂ ತಿಳಿದು ಬಂದಿಲ್ಲ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಮಲಪ್ಪುರಂ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಘಾತ ವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next