Advertisement

Managaluru; ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಪ್ರಾಣ ಉಳಿಸಿದ ಆರ್‌ಪಿಎಫ್ ಕಾನ್ಸ್‌ಟೇಬಲ್

08:08 PM Aug 19, 2024 | Team Udayavani |

ಮಂಗಳೂರು: ಮಂಗಳೂರು ಜಂಕ್ಷನ್‌ನಲ್ಲಿ ನಿಯೋಜನೆಗೊಂಡಿದ್ದ ರೈಲ್ವೇ ರಕ್ಷಣಾ ಪಡೆಯ (RPF) ಹೆಡ್ ಕಾನ್‌ಸ್ಟೆಬಲ್‌ ಒಬ್ಬರ ಸಮಯೋಚಿತ ಕಾರ್ಯಾಚರಣೆಯಿಂದ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಕ್ಕಿ ಬಿದ್ದಿದ್ದ ಪ್ರಯಾಣಿಕರೊಬ್ಬರ ಪ್ರಾಣ ಉಳಿದಿದೆ.

Advertisement

ಆಗಸ್ಟ್ 18 ರಂದು(ಭಾನುವಾರ) ರಾತ್ರಿ 9:35 ರ ಸುಮಾರಿಗೆ ರೈಲು ಸಂಖ್ಯೆ 16346 ನೇತ್ರಾವತಿ ಎಕ್ಸ್‌ಪ್ರೆಸ್ ಮಂಗಳೂರು ಜಂಕ್ಷನ್‌ನಲ್ಲಿ ಪ್ಲಾಟ್‌ಫಾರ್ಮ್ ನಂ. 1 ರಿಂದ ಹೊರಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಸಾಂಗ್ ಎಂದು ಗುರುತಿಸಲಾದ ಪ್ರಯಾಣಿಕನು ಚಲಿಸುವ ರೈಲನ್ನು ಹತ್ತಲು ಪ್ರಯತ್ನಿಸಿದ್ದು ಸಮತೋಲನವನ್ನು ಕಳೆದುಕೊಂಡು ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಬಿದ್ದಿದ್ದು, ಹೆಡ್ ಕಾನ್‌ಸ್ಟೆಬಲ್ ಎಂ. ರಾಘವನ್ ಅವರು ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗಿ ಕೈಯನ್ನು ಹಿಡಿದು ಸುರಕ್ಷಿತವಾಗಿ ಮೇಲಕ್ಕೆ ಎಳೆದು ರಕ್ಷಿಸಿ ಸಂಭವಿಸಬಹುದಾದ ದುರಂತವನ್ನು ತಪ್ಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next