Advertisement

ಮ್ಯಾನೇಜ್‌ಮೆಂಟ್‌ ಶಿಕ್ಷಣ ಕೌಶಲ್ಯಾಧಾರಿತವಾಗಿರಲಿ

12:35 PM Nov 26, 2017 | Team Udayavani |

ಬೆಂಗಳೂರು: ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೈಗಾರಿಕೆಗಳ ಅವಶ್ಯಕತೆಗೆ ತಕ್ಕುದಾದ ಶಿಕ್ಷಣವನ್ನು ನಿರ್ವಹಣಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡುವಂತಾಗಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದರು.

Advertisement

ಬೆಂಗಳೂರು ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್‌ ಸ್ಕೂಲ್‌ ಆಫ್ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ ಹಾಗೂ ನಿರ್ವಹಣಾ ಶಾಸ್ತ್ರದ ಪ್ರಾದೇಶಿಕ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಮಾರ್ಕೆಟಿಂಗ್‌ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ ಮ್ಯಾಟರ್‌ ಗ್ಲೋಬಲ್‌ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.

ನಿರ್ವಹಣಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ನೀಡಬೇಕು. ನಿರ್ವಹಣಾ ಶಾಸ್ತ್ರದಲ್ಲಿ ಪರಿಣಾಮಕಾರಿ ಬೋಧನೆ ಇಲ್ಲದಿದ್ದರೆ ವಿದ್ಯಾರ್ಥಿಗಳಿಂದ ಉತ್ತಮ ಫ‌ಲಿತಾಂಶ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ನಿರ್ವಹಣಾ ಶಾಸ್ತ್ರದ ಪಠ್ಯಕ್ರಮ ಇರಬೇಕು.

ಸಮಾಜ ಮತ್ತು ಸಮುದಾಯದ ಅಭಿವೃದ್ಧಿ ಯೋಜನೆಯ ಪ್ರಾಮುಖ್ಯತೆಯನ್ನು ಮ್ಯಾನೇಜ್‌ಮೆಂಟ್‌ ಶಿಕ್ಷಣದಿಂದ ತಿಳಿದುಬರುತ್ತದೆ ಎಂದು ಹೇಳಿದರು. ಬೆಂಗಳೂರು ಕೇಂದ್ರ ವಿವಿಯ ಕುಲಪತಿ ಪ್ರೊ. ಜಾಫೆಟ್‌, ಪ್ಯಾರಿಸ್‌ ಸ್ಕೂಲ್‌ ಆಫ್ ಮ್ಯಾನೇಜ್‌ಮೆಂಟ್‌ನ ವೂಲ್ಫ್ಗಂಗ್‌ ಸಿ. ಅಮನ್‌, ಸಿಎಂಆರ್‌ ವಿವಿಯ ಪ್ರೊ. ಶಿವ ಕೆ.ತ್ರಿಪಾಠಿ, ಸಿಬಿಎಸ್‌ಎಂಎಸ್‌ ನಿರ್ದೇಶಕ ಪ್ರೊ. ಕೆ.ಜನಾರ್ದನಮ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next