Advertisement

Mancheri; ಶಬರಿಮಲೆ ಯಾತ್ರಾರ್ಥಿಗಳ ವಾಹನ- ರಿಕ್ಷಾ ಡಿಕ್ಕಿ: ಮಕ್ಕಳು ಸೇರಿ ಐವರು ಸಾವು

08:12 AM Dec 16, 2023 | Team Udayavani |

ಮಲಪ್ಪುರಂ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಟೆಂಪೋ ಟ್ರಾವೆಲರ್ ಮತ್ತು ಆಟೋ ರಿಕ್ಷಾ ನಡುವಿನ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ ಘಟನೆ ಕೇರಳದ ಮಂಚೇರಿಯಲ್ಲಿ ನಡೆದಿದೆ.

Advertisement

ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಟೆಂಪೋ ಟ್ರಾವೆಲರ್ ಮಂಚೇರಿ ಬಳಿ ಆಟೋ ರಿಕ್ಷಾದೊಂದಿಗೆ ಮುಖಾಮುಖಿಯಾಗಿದೆ ಎಂದು ಅವರು ಹೇಳಿದ್ದಾರೆ.

ಘಟನೆಯಲ್ಲಿ ಐವರು ಶಬರಿಮಲೆ ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next