Advertisement

ಅಂತಿಮ ಏಕದಿನ: ಗಾಯಗೊಂಡ ಬುಮ್ರಾ ಪಂದ್ಯದಿಂದ ಹೊರಕ್ಕೆ; ಟಾಸ್ ಗೆದ್ದ ಭಾರತ

03:26 PM Jul 17, 2022 | Team Udayavani |

ಮ್ಯಾಂಚೆಸ್ಟರ್: ಇಂಗ್ಲೆಂಡ್ ಸರಣಿಯ ಅಂತಿಮ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ.

Advertisement

ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಗಾಯಗೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದ್ದು, ಜಸ್ಪ್ರೀತ್ ಬುಮ್ರಾ ಅವರು ಬೆನ್ನು ನೋವನ ಕಾರಣದಿಂದ ಈ ಪಂದ್ಯದಿಂದ ಹೊರಗುಳಿದಿದ್ದರು. ಅರ್ಶ್ ದೀಪ್ ಸಿಂಗ್ ಅವರು ಹೊಟ್ಟೆ ನೋವಿನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದಿದೆ.

ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಲಾರ್ಡ್ಸ್ ಪಂದ್ಯದಲ್ಲಿ ಆಡಿದ ತಂಡವನ್ನೇ ಉಳಿಸಿಕೊಳ್ಳಲಾಗಿದೆ. ಸರಣಿ ಇದೀಗ 1-1ರಿಂದ ಸಮಬಲವಾಗಿದ್ದು, ಈ ಪಂದ್ಯ ಗೆದ್ದವರು ಸರಣಿ ಜಯಿಸುತ್ತಾರೆ.

ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾ/ ವಿ.ಕೀ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ

ಭಾರತ: ರೋಹಿತ್ ಶರ್ಮಾ(ನಾ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

Advertisement
Advertisement

Udayavani is now on Telegram. Click here to join our channel and stay updated with the latest news.

Next