Advertisement

Bantwal ಮಂಚಿ: ಅಮಲು ಪದಾರ್ಥ ಸೇವನೆ; ಮೂವರ ಬಂಧನ

11:09 PM Jul 24, 2024 | Team Udayavani |

ಬಂಟ್ವಾಳ: ಮಂಚಿ ಗ್ರಾಮದ ಕುಕ್ಕಾಜೆಯಲ್ಲಿ ಅಮಲು ಪದಾರ್ಥ ಸೇವಿಸಿ ಅಸಭ್ಯವಾಗಿ ವರ್ತಿಸುವ ಜತೆಗೆ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.

Advertisement

ನಂದಾವರ ಕೋಟೆ ನಿವಾಸಿ ಮಹಮ್ಮದ್‌ ರಾಫಿದ್‌, ಬಾರೆಕಾಡು ನಿವಾಸಿ ಮಹಮ್ಮದ್‌ ಇರ್ಷಾದ್‌, ಕುಕ್ಕಾಜೆ ಮಸೀದಿ ಬಳಿ ನಿವಾಸಿ ದಾವುದುಲ್ಲ ಅಮೀರ್‌ ಬಂಧಿತ ಆರೋಪಿಗಳಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಂಚಿಯಲ್ಲಿ ಆರೋಪಿಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ಪಿಎಸ್‌ಐ ಹರೀಶ್‌ ಎಂ.ಆರ್‌. ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದಾಗ ಆರೋಪಿಗಳು ನಶೆಯಲ್ಲಿದ್ದು, ಬಳಿಕ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅಮಲು ಪದಾರ್ಥ ಸೇವಿಸಿರುವುದು ದೃಢಪಟ್ಟಿದೆ.

ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next