Advertisement

3 ತಿಂಗಳಿಗೊಮ್ಮೆ ಸಭೆ ಕಡ್ಡಾಯ: ಸಚಿವ ರಾಮಲಿಂಗಾರೆಡ್ಡಿ

03:45 AM Feb 19, 2017 | Team Udayavani |

ತುಮಕೂರು: ರಾಜ್ಯದ ಎಲ್ಲ ಬಸ್‌ ನಿಲ್ದಾಣಗಳಲ್ಲಿ  ಮೂರು ತಿಂಗಳಿಗೊಮ್ಮೆ ಜನಪ್ರತಿನಿಧಿಗಳ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು. 

Advertisement

ಸಭೆ ನಡೆಸದ ವಿಭಾಗೀಯ ನಿಯಂತ್ರಣಾಧಿಕಾರಿಗಳ ವಾರ್ಷಿಕ ವೇತನ ಬಡ್ತಿಗೆ ಕತ್ತರಿ ಬೀಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು. 

ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಪ್ರತಿ 3 ತಿಂಗಳಿಗೊಮ್ಮೆ ಪ್ರಯಾಣಿಕರ ಸಾರಿಗೆ ಸೌಲಭ್ಯಗಳನ್ನು ಉತ್ತಮಗೊಳಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಸಂಸದರು, ಶಾಸಕರು, ಜಿಪಂ, ತಾಪಂ, ಗ್ರಾಪಂ ಸದಸ್ಯರು ಹಾಗೂ ವಿವಿಧ ಜನಪ್ರತಿನಿಧಿಗಳನ್ನೊಳಗೊಂಡ ಸಭೆ ನಡೆಸಬೇಕೆಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next