Advertisement

ಮಹದಾಯಿ ವಿವಾದ ಬಗೆಹರಿಸಿ ಮಾಧ್ಯಮಗಳ ಮುಂದೆ ಬರುತ್ತೇವೆ: ಶೆಟ್ಟರ್‌

07:45 AM Nov 30, 2017 | Team Udayavani |

ಬೆಂಗಳೂರು: ಮಹದಾಯಿ ವಿವಾದ ಬಗೆಹರಿಸುವ ವಿಚಾರದಲ್ಲಿ ನಾವು ಯಾರೊಂದಿಗೆ ಮಾತನಾಡಿದ್ದೇವೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಆದರೆ, ವಿವಾದ ಬಗೆಹರಿಸಿ ಮಾಧ್ಯಮಗಳ ಮುಂದೆ ಬರುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

Advertisement

ಮಹದಾಯಿ ವಿವಾದ ಬಗೆಹರಿಸುವ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿವಾದ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಈ ಬಗ್ಗೆ ಯಾರ ಜತೆ ಮಾತನಾಡಿದ್ದೇವೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಒಂದೊಮ್ಮೆ ಹೇಳಿದರೆ ಮತ್ತಷ್ಟು ಸಮಸ್ಯೆ ಸೃಷ್ಟಿಯಾಗುತ್ತದೆ ಎಂದರು.

ಆದರೆ, ಈ ವಿಚಾರದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ಈ ಸಮಸ್ಯೆ ಬಗೆಹರಿಸುತ್ತೇವೆ. ವಿವಾದ ಬಗೆಹರಿದ ನಂತರ ಮಾಧ್ಯಮಗಳ ಮುಂದೆ ಬರುತ್ತೇವೆ. ಅದುವರೆಗೆ ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next