Advertisement

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

10:51 AM Sep 05, 2024 | Team Udayavani |

ಮಂಡ್ಯ: ಜಿಲ್ಲೆಯಲ್ಲಿ ನಡೆದಿದ್ದ ಹೆಣ್ಣು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಪಾಂಡವಪುರ ತಾಲೂಕಿನ ಎಂ.ಶೆಟ್ಟಹಳ್ಳಿಯ ಅಭಿಷೇಕ್‌ ಮತ್ತು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ವೀರೇಶ್‌ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದು ಈ ಮೂಲಕ ಇದುವರೆಗೂ ಒಟ್ಟು 30 ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 2 ಸ್ಕ್ಯಾನಿಂಗ್‌ ಉಪಕರಣಗಳು, 3 ಕಾರು, 3 ಮೊಬೈಲ್‌ ಸೇರಿದಂತೆ ಒಟ್ಟು 23 ಲಕ್ಷ ರೂ. ಮೌಲ್ಯದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ. 34 ವರ್ಷಗಳಿಂದ ಸಕ್ರಿಯವಾಗಿದ್ದ ಈ ಜಾಲದಲ್ಲಿ ಇನ್ನೂ 10ರಿಂದ 15 ಆರೋಪಿಗಳು ಇರುವುದು ಕಂಡುಬಂದಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next