Advertisement

ಮಂಡ್ಯ : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಂದಲೇ ಯುವಕನಿಗೆ ಚಾಕು ಇರಿತ

12:05 AM Dec 02, 2020 | mahesh |

ಮಂಡ್ಯ: ವಿನಾಕಾರಣ ಸ್ನೇಹಿತರ ನಡುವೆ ಜಗಳ ಉಂಟಾಗಿ ಚಾಕುವಿನ ಇರಿತ ದೊಂದಿಗೆ ಅಂತ್ಯವಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ಸಂಭವಿಸಿದೆ.

Advertisement

ಗ್ರಾಮದ ಜಯರಾಮು ಎಂಬೋರ ಪುತ್ರ 22 ವರ್ಷದ ಆನಂದ್ ಎಂಬಾತನಿಗೆ ಈತನ ಸ್ನೇಹಿತರೇ ಚಾಕುವಿನಿಂದ ಇರಿದಿದ್ದಾರೆ.

ಗಂಭೀರವಾಗಿ ಆನಂದ್ ಗೆ ಶ್ವಾಸಕೋಶಸಕ್ಕೆ ಹಾನಿಯಾಗಿದೆ. ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಆನಂದ್ ಚಿಕಿತ್ಸೆ ಪಡೆಯುತ್ತಿದ್ದು, ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next