Advertisement

ಮಂಡ್ಯ ಮತ್ತು ಹಾಸನ ಜೆಡಿಎಸ್ ನ ಕ್ಷೇತ್ರಗಳು: ದೇವೇಗೌಡ

07:05 AM Mar 03, 2019 | Team Udayavani |

ಮಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ಮಾತಾಡಿದ್ದು, ಮಂಡ್ಯ ಮತ್ತು ಹಾಸನ ಎರಡೂ ಕೂಡ ಜೆಡಿಎಸ್ ನ ಕ್ಷೇತ್ರಗಳು ಎಂದಿದ್ದಾರೆ.

Advertisement

ಮಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡ, ಸುಮಲತಾ ಅವರು ಸ್ಪರ್ಧಿಸಲು ಅಪೇಕ್ಷೆ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಮಂಡ್ಯ ಕ್ಷೇತ್ರ ಜೆಡಿಎಸ್ ನ ಕ್ಷೇತ್ರ ಎಂದು ಪರೋಕ್ಷವಾಗಿ ಸುಮಲತಾ ಅವರಿಗೆ ಟಾಂಗ್ ನೀಡಿದರು. 

ನಿಖಿಲ್ ಚುಣಾವಣೆಗೆ ನಿಲ್ಲಲಿ: ಮಂಡ್ಯ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಆಸೆ ಪಡುತ್ತಿದ್ದಾರೆ. ಆದರೆ ನಿಖಿಲ್ ಗೆ ಈಗಲೇ ಚುಣಾವಣಾ ಸ್ಪರ್ಧೆಯ ಬಗ್ಗೆ ಆಸಕ್ತಿಯಿಲ್ಲ. ಎರಡು ವರ್ಷ ರಾಜಕೀಯ ಬೇಡ ಎನ್ನುತ್ತಿದ್ದಾನೆ. ಆದರೆ ಅಭಿಮಾನಿಗಳು ಒತ್ತಾಯ ಮಾಡುತ್ತಾರೆಂದರೆ ನಿಖಿಲ್ ಗೆ ಸ್ಪರ್ಧೆ ಮಾಡು ಎಂದು ನಾನೇ ಹೇಳಿದ್ದೇನೆ ಎಂದರು. 

ಮೊಯಿಲಿ ಕ್ಷೇತ್ರದ ಬಗ್ಗೆ ನಿರ್ಧಾರವಾಗಿಲ್ಲ: ಹಾಲಿ ಸಂಸದ ವೀರಪ್ಪ ಮೊಯಿಲಿ ಸ್ಪರ್ಧಿಸುವ ಚಿಕ್ಕಬಳ್ಳಾಪುರ ಕ್ಷೇತ್ರದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಮೊಯಿಲಿಯವರು ಜೆಡಿಎಸ್ ಗೆ ಹತ್ತು ಸ್ಥಾನಗಳನ್ನು ಕೊಡಬೇಕೆಂದು ಹೇಳಿದ್ದಾರೆ. ಚಿಕ್ಕ ಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಥವಾ ಜೆಡಿಎಸ್ ಯಾವ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ನಿರ್ಧಾರವಾಗಿಲ್ಲ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next