Advertisement

ಮಂಡ್ಯ:ಇನ್ನೋರ್ವ ಜೆಡಿಎಸ್‌ ಕಾರ್ಯಕರ್ತನ ಹತ್ಯೆ;ಉದ್ವಿಗ್ನ ವಾತಾವರಣ 

09:34 AM Jan 01, 2017 | Team Udayavani |

ಮಂಡ್ಯ : ಜಿಲ್ಲೆಯಲ್ಲಿ ವಾರದ ಒಳಗೆ ನಾಲ್ವರು ಜೆಡಿಎಸ್‌ ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆಗೈಯಲಾಗಿದ್ದು ಇದೀಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಶನಿವಾರ ತಡರಾತ್ರಿ ಕೆ.ಆರ್‌.ಪೇಟೆಯಲ್ಲಿ ಜೆಡಿಎಸ್‌ ಮುಖಂಡನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

Advertisement

ಮೈಸೂರು -ಕೆ.ಆರ್‌.ಪೇಟೆ ಮುಖ್ಯ ರಸ್ತೆಯಲ್ಲಿ  ಮರುಕನ ಹಳ್ಳಿ ಹರೀಶ್‌(ಗುಂಡ) ಎನ್ನುವ ಕಾರ್ಯಕರ್ತನನ್ನು ದುಷ್ಕರ್ಮಿಗಳು ಬರ್ಬರವಾಗಿ ಕಡಿದು ಕೊಲೆಗೈದು ಪರಾರಿಯಾಗಿದ್ದಾರೆ.ಹರೀಶ್‌ಗೆ 1 ವರ್ಷ ಪ್ರಾಯದ ಪುಟ್ಟ ಮಗುವಿದೆ ಎಂದು ವರದಿಯಾಗಿದೆ. 

ಘಟನೆ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು , ಸ್ಥಳಕ್ಕೆ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು ಶಂಕಿತ ಆರೋಪಿಗಳ ಮನೆಗಳಿಗೆ ಬೆಂಕಿ ಹಚ್ಚಿದ ಬಗ್ಗೆ ವರದಿಯಾಗಿದೆ.

ಸ್ಥಳಕ್ಕೆ ಐಜಿಪಿ ಬಿ.ಕೆ.ಸಿಂಗ್‌, ಪೊಲೀಸ್‌ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್‌ ಭೇಟಿ ನೀಡಿದ್ದಾರೆ. ಆರೋಪಿಗಳ ಪತ್ತೆಗೆ 2 ತಂಡಗಳನ್ನು ರಚಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next