Advertisement

ಮಂಡ್ಯ: ಕೈ ಬೆಂಬಲಿಗರಿಂದ ನಿಖಿಲ್‌ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ?

03:11 PM Mar 22, 2019 | |

ಮಂಡ್ಯ: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು , ಶುಕ್ರವಾರ ಸಂಜೆ ಕೆ.ಆರ್‌.ಪೇಟೆಯ  ಸೋಮನಹಳ್ಳಿ  ಬಳಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಕಾರನ್ನು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ. 

Advertisement

ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಅವರು ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ  ಮಾಜಿ ಎಂಎಲ್‌ಸಿ, ಕಾಂಗ್ರೆಸ್‌ ನಾಯಕ  ಚಂದ್ರಶೇಖರ್‌ ಬೆಂಬಲಿಗರು ಕಾರನ್ನು ಅಡ್ಡಗಟ್ಟಿ ವಾಗ್ವಾದ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. 

ಈ ವೇಳೆ ಶಾಸಕ ನಾರಾಯಣ ಗೌಡ ಅವರು ಆಪ್ತ ಸಹಾಯಕನ ಮೇಲೆ ಹಲ್ಲೆ   ನಡೆಸಲಾಗಿದೆ ಎಂದು ವರದಿಯಾಗಿದೆ.

ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next