Advertisement

ಮಂಡ್ಯ: ಮೂವರು ಬೈಕ್ ಕಳ್ಳರ ಬಂಧನ ಮತ್ತೊಬ್ಬ ಪರಾರಿ, 7 ಬೈಕ್‌ಗಳ ವಶ ಪಡಿಸಿದ ಪೊಲೀಸರು

08:31 PM Sep 26, 2020 | sudhir |

ಮಂಡ್ಯ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮೇಲುಕೋಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರಿಂದ 2ಲಕ್ಷ ರೂ. ಮೌಲ್ಯದ 7 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಮಂಡ್ಯ ತಾಲೂಕಿನ ಎಚ್.ಕೋಡಹಳ್ಳಿ ಫಾರಂನ ಮಂಜು ಆಲಿಯಾಸ್ ಗಜ(29), ಮಳವಳ್ಳಿ ಟೌನ್‌ನ ಕೀರ್ತಿನಗರ ಹಾಗೂ ಕೋಟೆ ಬೀದಿಯ ಆಟೋ ಚಾಲಕರಾದ ಮನ್ಸೂರ್(28) ಹಾಗೂ ಗುರುಪ್ರಸಾದ್ ಆಲಿಯಾಸ್ ಕೂಳೆ ಬಂಧಿತ ಆರೋಪಿಗಳು.

ಕಳೆದ ಮಾ.10ರಂದು ಮೇಲುಕೋಟೆ ಸಮೀಪದ ಹಿರೇಗೌಡನಕೊಪ್ಪಲು ಗ್ರಾಮದ ಚಂದ್ರೇಗೌಡ ಎಂಬುವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಸೆ.22ರಂದು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವಿವಿಧೆಡೆ ಬೈಕ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ ;ವಾಯುವಿಹಾರಕ್ಕೆ ತೆರಳಿದಾಗ ದುಷ್ಕರ್ಮಿಗಳಿಂದ ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

ಮೂವರನ್ನು ಬಂಧಿಸಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳಿಂದ 2 ಲಕ್ಷ ರೂ. ಮೌಲ್ಯದ 7 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ನಗದು ಬಹುಮಾನ ಘೋಷಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next