Advertisement

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

12:11 AM Oct 24, 2024 | Team Udayavani |

ಮಂಡ್ಯ: ವಿದ್ಯಾವಂತ ಹಾಗೂ ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಹಾಗೂ ಒಂದೇ ಸೂರಿನಡಿ ರೈತರಿಗೆ ಎಲ್ಲ ರೀತಿಯ ಕೃಷಿಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಭಾರತದಲ್ಲಿಯೇ ಮೊದಲ ಬಾರಿಗೆ ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲಾಗುತ್ತಿದೆ.

Advertisement

ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ಒಂದೂವರೆ ತಿಂಗಳಲ್ಲಿ ಶಾಲೆ ತಲೆಎತ್ತಲಿದೆ.

ಮೈಸೂರು ಮಹಾರಾಣಿ ಕಾಲೇಜಿನ ನಿರ್ವಹಣ ವಿಭಾಗದ ಉಪನ್ಯಾಸಕ ಶ್ರೀರಂಗಪಟ್ಟಣದ ಗಂಜಾಂನ ಸತ್ಯಮೂರ್ತಿ ಹಾಗೂ ಅವರ ತಂಡ ರೈತರ ಶಾಲೆ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಇಂಥದ್ದೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

ಉಪನ್ಯಾಸಕ ಸತ್ಯಮೂರ್ತಿ ನೇತೃತ್ವದಲ್ಲಿ ಏಳು ಸದಸ್ಯರ ಗುಂಪು, ರೈತ ಕುಟುಂಬದ ಎಲ್ಲ ಶಿಕ್ಷಕರು, ರೈತರ ಸಂಕಷ್ಟ ಮತ್ತು ವಿವಿಧ ಸಮಸ್ಯೆಗಳನ್ನು ಪರಿಗಣಿಸಿ ಕೃಷಿಯನ್ನು ಲಾಭದಾಯಕ ಮಾಡಲು ಶಾಲೆಯನ್ನು ತೆರೆಯಲು ನಿರ್ಧರಿಸಿ, ಎರಡು ವರ್ಷಗಳ ಕಾಲ ಸಂಘದಿಂದ ವಿವಿಧ ಸಮಾಜಮುಖಿ ಕಾರ್ಯ ಮಾಡುವ ಮೂಲಕ ರೈತರ ಶಾಲೆಗೆ ಮುನ್ನುಡಿ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next