Advertisement

Mandya; ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲ: ಸುಮಲತಾ

05:59 PM Mar 07, 2024 | Team Udayavani |

ಮಂಡ್ಯ: ”ಯಾರೂ ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲವಲ್ಲ” ಎಂದು ಮಂಡ್ಯ ಸಂಸದೆ ಸುಮಲತಾ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಟಿಕೆಟ್ ಕುರಿತು ಪ್ರತಿಕ್ರಿಯಿಸಿ ‘ಬಿಜೆಪಿ ವರಿಷ್ಠರು ವಿಶ್ವಾಸದ ಮಾತುಗಳು, ಪ್ರೋತ್ಸಾಹದ ಮಾತುಗಳನ್ನು ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ನನ್ನ ಬಗ್ಗೆ ಗೌರವ ಇದೆ. ನೀವು ನಮ್ಮ ಪಕ್ಷಕ್ಕೆ ಬೇಕು. ಮಂಡ್ಯ ಭಾಗದಲ್ಲಿ ಬಿಜೆಪಿ ಬೆಳೆಸಲು ನಿಮ್ಮ ಶಕ್ತಿ ಬೇಕು ಎಂದು ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಹೇಳಿಯೇ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಇಷ್ಟೂ ಆದ ಮೇಲೆ ನಿಮಗೆ ನಂಬಿಕೆ ಇಲ್ಲ ಅಂದರೆ ಇನ್ನು ಒಂದು ವಾರ ಕಾದು ನೋಡಿ”ಎಂದರು.

ಮೈತ್ರಿಯಿಂದಾಗಿ ಟಿಕೆಟ್ ಜೆಡಿಎಸ್ ಪಾಲಾದರೆ ಎಂಬ ಪ್ರಶ್ನೆಗೆ ಉತ್ತರಿಸಿ ‘ರಾಜಕೀಯದಲ್ಲಿ ಏನು ಬೇಕಾದರೂ ಆಗಲಿ. ಯಾರೂ ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲವಲ್ಲ. ನಮ್ಮದೇ ಆದ ನಿರ್ಧಾರ ಕೈಗೊಳ್ಳಬಹುದಲ್ಲ’ಎಂದರು.

‘ಟಿಕೆಟ್ ಘೋಷಣೆ ಆದ ಮೇಲೆ ನೋಡೋಣ. ನಾನೇ ಇಷ್ಟು ತಾಳ್ಮೆಯಿಂದ ಇದ್ದೇನೆ, ನೀವೆಲ್ಲ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ’ ಎಂದು ಸುದ್ದಿಗಾರರಿಗೆ ನಗು ನಗುತ್ತಾ ಪ್ರತಿಕ್ರಿಯಿಸಿದರು.

ಜೆಡಿಎಸ್ ಬಿಗಿ ಪಟ್ಟು

Advertisement

ಜೆಡಿಎಸ್ ಕಾರ್ಯಕರ್ತರ ಬಲ ಇರುವ, ಒಕ್ಕಲಿಗ ಪ್ರಾಬಲ್ಯದ ಕ್ಷೇತವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲು ಜೆಡಿಎಸ್ ಸಿದ್ಧವಾಗಿಲ್ಲ. ಸುಮಲತಾ ಅವರೂ ಬಿಜೆಪಿ ಟಿಕೆಟ್ ನನಗೇ ಸಿಗುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಕಳೆದ ಬಾರಿ ಬಂಡಾಯ ಸಾರಿ ದೇಶದಲ್ಲೇ ಗಮನ ಸೆಳೆದ ಮಂಡ್ಯ ಕ್ಷೇತ್ರದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ,ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ? ಮುಂದಿನ ರಾಜಕೀಯ ಯಾವ ರೀತಿ ತಿರುವು ಪಡೆದುಕೊಳ್ಳಲಿದೆ? ಬಿಜೆಪಿ ಟಿಕೆಟ್ ಸಿಗದಿದ್ದರೆ ಸುಮಲತಾ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next