Advertisement

Mandya ಹೆಣ್ಣು ಭ್ರೂಣ ಹತ್ಯೆ ಕೇಸ್‌: ಮತ್ತೆ ಮೂವರ ಬಂಧನ

10:50 PM Sep 08, 2024 | Team Udayavani |

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಏಳು ಮಂದಿ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಇದುವರೆಗೂ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

Advertisement

ಆರೋಪಿಗಳಾದ ರಾಮಕೃಷ್ಣ, ಸೋಮು ಪಾಟೀಲ್‌ ಹಾಗೂ ಗುರು ಎಂಬಾತನನ್ನು ಶನಿವಾರ ಸಂಜೆ ಬಂಧಿ ಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇವರು ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಪಾಂಡವಪುರ ಆರೋಗ್ಯ ಇಲಾಖೆಯ ವಸತಿ ಗೃಹ, ಮೇಲುಕೋಟೆ, ನಾಗಮಂಗಲ, ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next