Advertisement

Mandya ಕುತೂಹಲ; ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ

05:13 PM Mar 31, 2024 | Team Udayavani |

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರನ್ನ ಭಾನುವಾರ ಭೇಟಿ ಮಾಡಿ ಚುನಾವಣೆಗೆ ಸಹಕಾರ ಕೋರಿದರು.ಜೆಪಿ ನಗರದ ನಿವಾಸದಲ್ಲಿ ನಡೆದ ಭೇಟಿ ವೇಳೆ ಸುಮಲತಾ ಅವರ ಪುತ್ರ ಅಭಿಷೇಕ್ ಅವರು ಹಾಜರಿದ್ದರು.

Advertisement

ಕೆಲ ಹೊತ್ತು ಮಾತುಕತೆ ನಡೆಸಿದ್ದು, ಸುಮಲತಾ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವ ತೀವ್ರ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ಸುಮಲತಾ ಅವರಿಗೆ ಮತ್ತೊಮ್ಮೆ ಮಂಡ್ಯ ಲೋಕಸಭಾ ಕ್ಷೇತದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಸುಮಲತಾ ಅವರ ಜೆಪಿ ನಗರದ ನಿವಾಸದ ಮುಂದೆ ಶನಿವಾರ ನೂರಾರು ಅಭಿಮಾನಿಗಳು ಜಮಾಯಿಸಿದ್ದರು.

ಪ್ರಮುಖ ಬೆಂಬಲಿಗರೊಂದಿಗೆ ಚರ್ಚೆ ನಡೆಸಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಸಂಸದೆ ಸುಮಲತಾ, ‘ನಿಮ್ಮನ್ನ ನೋಯಿಸುವ ನಿರ್ಧಾರ ನಾನು ತೆಗೆದುಕೊಳ್ಳುವುದಿಲ್ಲ. ಏಪ್ರಿಲ್​ 3ರಂದು ಮಂಡ್ಯದಲ್ಲಿ ಸಭೆ ಮಾಡಿ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಕುತೂಹಲ ಉಳಿಸಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ನನ್ನನ್ನು ಭೇಟಿ ಮಾಡಲು ಅಭ್ಯಂತರವಿಲ್ಲ ಎಂದು ಸುಮಲತಾ ಹೇಳಿದ್ದರು. ಕುಮಾರಸ್ವಾಮಿ ಅವರು ”ನಾನು ಮತ್ತು ಅಂಬರೀಶ್‌ ಹಲವು ವರ್ಷಗಳ ಸ್ನೇಹಿತರು. ಸಂಸದೆ ಸುಮಲತಾ ಅವರು ಕೂಡ ನನಗೆ ಊಟ ಬಡಿಸಿದ್ದಾರೆ. ನಾವು ಶಾಶ್ವತ ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ಸೂಕ್ತ ನಿರ್ಧಾರವೊಂದನ್ನು ಘೋಷಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next