Advertisement

ಮಂಡ್ಯ ಕೇಂದ್ರ ಸ್ಥಾನದಲ್ಲಿ ತೆನೆ ಹೊರುವವರು ಯಾರು?

04:08 PM Aug 23, 2022 | Team Udayavani |

ಮಂಡ್ಯ: ಜಿಲ್ಲೆಯ ಕೇಂದ್ರ ಸ್ಥಾನ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾ ವಣೆಯ ಜೆಡಿಎಸ್‌ನ ಟಿಕೆಟ್‌ಗೆ ಪೈಪೋಟಿ ಹೆಚ್ಚಾ ಗಿದ್ದು, ಆಕಾಂಕ್ಷಿಗಳಲ್ಲಿ ಗೊಂದಲ, ಭಿನ್ನಮತಕ್ಕೂ ಕಾರಣವಾಗಿದೆ.

Advertisement

ಟಿಕೆಟ್‌ ಆಕಾಂಕ್ಷಿಗಳು ಈಗಾಗಲೇ ವರಿಷ್ಠರ ಸೂಚನೆಯಂತೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ವರಿಷ್ಠರು ಕೆಲವು ಆಕಾಂಕ್ಷಿಗಳಿಗೆ ಭರವಸೆ ನೀಡಿದ್ದು, ಅದರಂತೆ ಕ್ಷೇತ್ರದಲ್ಲಿ ನಿರಂತರವಾಗಿ ಸಾಮಾಜಿಕ ಚಟು ವಟಿಕೆಗಳಲ್ಲಿ ತೊಡಗಿ ಮತದಾರರಿಗೆ ಹತ್ತಿರವಾಗುವ ಪ್ರಯತ್ನದಲ್ಲಿದ್ದಾರೆ.

ಸಿದ್ಧರಾಗಿರುವ ಆಕಾಂಕ್ಷಿಗಳು: ಜೆಡಿಎಸ್‌ನ ಟಿಕೆಟ್‌ ಆಕಾಂಕ್ಷಿಗಳ ದಂಡೇ ಇದೆ. 3ನೇ ಬಾ ರಿ ಶಾಸಕರಾಗಿ ರುವ ಎಂ.ಶ್ರೀನಿವಾಸ್‌ ಮತ್ತೂಮ್ಮೆ ಟಿಕೆಟ್‌ ಬಯಸಿದ್ದಾರೆ. ಇದರೊಂದಿಗೆ ಅವರ ಅಳಿ ಯ ಎಚ್‌.ಎನ್‌. ಯೋಗೇಶ್‌, ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮ ಚಂದ್ರು, ಕೀಲಾರ ರಾಧಾಕೃಷ್ಣ, ಪಿಇಟಿ ಅಧ್ಯಕ್ಷ ಕೆ.ಎಸ್‌. ವಿಜಯಾನಂದ, ಜೆಡಿಎಸ್‌ ಮುಖಂಡ ಮುದ್ದನಘಟ್ಟ ಮಹಾಲಿಂಗೇಗೌಡರು ರೇಸ್‌ನಲ್ಲಿದ್ದಾರೆ.

ವರಿಷ್ಠರ ಭರವಸೆ: ಜೆಡಿಎಸ್‌ ವರಿಷ್ಠರು ಈಗಾಗಲೇ ಕೆಲವು ಆಕಾಂಕ್ಷಿಗಳಿಗೆ ಟಿಕೆಟ್‌ ಭರವಸೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಸಂಚರಿಸು ತ್ತಿದ್ದಾರೆ. ಮತದಾರರ ಓಲೈಕೆ ಮಾಡುವ ಪ್ರಯತ್ನದಲ್ಲಿದ್ದಾರೆ. ಅಲ್ಲದೆ, ಸಮಾಜ ಸೇವೆಯಲ್ಲಿ ತೊಡಗಿ ಜನರ ಅಭಿಪ್ರಾಯದ ಮೂಲಕ ವರಿಷ್ಠರ ಗಮನ ಸೆಳೆಯಲು ಮುಂದಾಗಿದ್ದಾರೆ.

ಗೊಂದಲದಲ್ಲಿ ಆಕಾಂಕ್ಷಿತರು: ವರಿಷ್ಠರ ನಡೆಗಳಿಂದ ಆಕಾಂಕ್ಷಿಗಳು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಈಗಾಗಲೇ ನನಗೆ ಟಿಕೆಟ್‌ ನೀಡುತ್ತೇವೆ ಎಂದು ಭರವಸೆ ನೀಡಲಾಗಿತ್ತು. ಆದರೆ, ಕಳೆದ ಆರು ತಿಂಗಳಿನಿಂದ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ಗೊಂದಲ ಉಂಟಾಗಿದೆ ಎಂದು ಕೀಲಾರ ರಾಧಾಕೃಷ್ಣ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಡಲು ಸಜ್ಜಾಗಿದ್ದಾರೆ. ಇತ್ತ ಶಾಸಕ ಎಂ.ಶ್ರೀನಿವಾಸ್‌ ಅಳಿಯ ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌ ತಮ್ಮ ಬೆಂಬಲಿಗರ ಮೂಲಕ ವರಿಷ್ಠರಿಗೆ ಒತ್ತಡ ಹಾಕುವ ಪ್ರಯತ್ನ ನಡೆಸಿದ್ದಾರೆ.

Advertisement

ಅದ್ದೂರಿ ಹುಟ್ಟುಹಬ್ಬಗಳಿಂದ ದೂರವಿದ್ದ ಪಿಇಟಿ ಅಧ್ಯಕ್ಷ ಕೆ.ಎಸ್‌.ವಿಜಯಾನಂದ ಈ ಬಾರಿ ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡು ಟಿಕೆಟ್‌ ಆಕಾಂಕ್ಷಿ ಎಂಬ ಸಂದೇಶ ರವಾನಿಸಿದ್ದಾರೆ. ಇತ್ತ ಮನ್‌ ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು ಕ್ಷೇತ್ರ ಸುತ್ತು ತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಕೀಲಾರ ರಾಧಾಕೃಷ್ಣ ತನ್ನದೇ ಆದ ಸ್ವಯಂ ಸೇವಕರ ಪಡೆ ಕಟ್ಟಿ ಜನರ ಬಳಿಗೆ ಹೋಗಲು ಸಜ್ಜಾಗುತ್ತಿದ್ದಾರೆ.

ಕಳೆದ ಬಾರಿಯೂ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟ್ಟು : ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆಯ್ಕೆಯೂ ಕಗ್ಗಂಟಾಗಿತ್ತು. ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದರಿಂದ ಅಳೆದು ತೂಗಿ ಶಾಸಕ ಎಂ.ಶ್ರೀನಿವಾಸ್‌ರಿಗೆ ಮಣೆ ಹಾಕಲಾಗಿತ್ತು. ಆಕಾಂಕ್ಷಿಗಳಿಗೆ ಮುಂದಿನ ಬಾರಿ ಟಿಕೆಟ್‌ ನೀಡುವ ಭರವಸೆ ನೀಡಲಾಗಿತ್ತು. ಆಕಾಂಕ್ಷಿಗಳಾಗಿದ್ದ ಡಾ.ಕೃಷ್ಣ, ಅಶೋಕ್‌ಜಯರಾಂ ಜೆಡಿಎಸ್‌ ತೊರೆದು ಕೈ ಸೇರ್ಪಡೆಗೊಂಡರು. ಈಗ ಕೀಲಾರ ರಾಧಾಕೃಷ್ಣ ಕೂಡ ಕಾಂಗ್ರೆಸ್‌ ಸೇರುವ ಸಿದ್ಧತೆಯಲ್ಲಿದ್ದಾರೆ. ಆದರೆ, ಈ ಬಾರಿ ಅಭ್ಯರ್ಥಿ ಆಯ್ಕೆ ಕಳೆದ ಬಾರಿಗಿಂತ ಕಗ್ಗಂಟಾಗಿ ಪರಿಣಮಿಸಲಿದೆ.

ಇಕ್ಕಟ್ಟಿನಲ್ಲಿ ಸಿಲುಕಿದ ಶಾಸಕ ಎಂ.ಶ್ರೀನಿವಾಸ್‌ :ಹಾಲಿ ಶಾಸಕ ಎಂ.ಶ್ರೀನಿವಾಸ್‌ ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಆದರೆ, ಒಂದು ವೇಳೆ ಟಿಕೆಟ್‌ ಕೈತಪ್ಪಿದರೆ ತಮ್ಮ ಅಳಿಯ ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌, ಆಪ್ತ ಕೆ.ಎಸ್‌. ವಿಜಯಾನಂದ ಇಬ್ಬರಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಇದು ಶಾಸಕ ಎಂ.ಶ್ರೀನಿವಾಸ್‌ಗೂ ತಲೆ ನೋವಾಗಿ ಪರಿಣಮಿಸಿದೆ. ಎಚ್‌.ಎನ್‌.ಯೋಗೇಶ್‌ ಹಾಗೂ ಕೆ.ಎಸ್‌.ವಿಜಯಾನಂದ ಇಬ್ಬರೂ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಮುನ್ನಲೆಯಲ್ಲಿರುವ ಟಿಕೆಟ್‌ ಆಕಾಂಕ್ಷಿಗಳು : ಜೆಡಿಎಸ್‌ನಲ್ಲಿ ಸದ್ಯಕ್ಕೆ ನಾಲ್ವರು ಆಕಾಂಕ್ಷಿಗಳು ಮುನ್ನಲೆಯಲ್ಲಿದ್ದಾರೆ. ಶಾಸಕ ಎಂ.ಶ್ರೀನಿವಾಸ್‌, ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು, ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌ ಹಾಗೂ ಪಿಇಟಿ ಅಧ್ಯಕ್ಷ ಕೆ.ಎಸ್‌. ವಿಜಯಾನಂದ ಹೆಸರು ಬಲವಾಗಿ ಕೇಳಿ ಬರುತ್ತಿವೆ. ಆದರೆ ಜೆಡಿಎಸ್‌ ವರಿಷ್ಠರು ಯಾರಿಗೆ ಟಿಕೆಟ್‌ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

 

– ಎಚ್‌.ಶಿವರಾಜು

Advertisement

Udayavani is now on Telegram. Click here to join our channel and stay updated with the latest news.

Next