Advertisement
ವಾಸ್ತವದಲ್ಲಿ ಬಿದ್ದಿರುವ ಮಳೆಯ ಪ್ರಮಾಣಕ್ಕೂ ಮಾಪನದಲ್ಲಿ ದಾಖಲಾಗಿರುವ ಮಳೆಯ ಪ್ರಮಾಣಕ್ಕೂ ಸಾಕಷ್ಟು ವ್ಯತ್ಯಾಸ ಕಂಡುಬರುತ್ತಿದೆ. ಮಾಪನದಲ್ಲಿ ದಾಖಲಾಗಿರುವ ಮಳೆ ಜಿಲ್ಲೆಯಲ್ಲಿ ಆಗಿಲ್ಲ. ಇದರಿಂದ ಮಳೆ ಮಾಪನ ಕೇಂದ್ರ ನೀಡುವ ಮಾಹಿತಿಯನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ. ಜಿಲ್ಲೆಯ ಪ್ರತಿ ಹೋಬಳಿ ಕೇಂದ್ರದಲ್ಲೂ ಸ್ವಯಂ ಚಾಲಿತ ಮಳೆ ಮಾಪನ ಕೇಂದ್ರಗಳಿವೆ. ಅಲ್ಲದೆ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅಳವಡಿಸಿರುವ ಟೆಲಿಮೆಟ್ರಿಕ್ ರೈನ್ಗೇಜ್ ಸ್ಟೇಷನ್ಗಳೂ ಅಲ್ಲಲ್ಲಿವೆ. ಈ ಎಲ್ಲಾ ಕೇಂದ್ರಗಳಲ್ಲೂ ಮಳೆಯ ಪ್ರಮಾಣ ದಾಖಲಾಗುತ್ತಿದೆ. ಅದು ನೀಡುತ್ತಿರುವ ಮಾಹಿತಿ ವೈಜ್ಞಾನಿಕವೇ, ಅವೈಜ್ಞಾನಿಕವೇ ಎಂಬುದು ಮಾತ್ರ ಗೊತ್ತಾಗುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರ ನೀಡುತ್ತಿರುವ ಮಳೆ ಮಾಹಿತಿಯ ಬಗ್ಗೆ ಅಪನಂಬಿಕೆ ಸೃಷ್ಟಿಯಾಗುತ್ತಿರುವುದಂತೂ ಸತ್ಯ. ಏಕೆಂದರೆ, ಮಾಪನದಲ್ಲಿ ದಾಖಲಾಗಿರುವ ಮಳೆ ಜಿಲ್ಲೆಯಲ್ಲಿ ಕಾಣಸಿಗದಿರುವುದೇ ಮುಖ್ಯ ಕಾರಣವಾಗಿದೆ.
Related Articles
Advertisement
ಮಳೆಯ ಪ್ರಮಾಣ ಅಳೆಯುವುದು ಹೇಗೆ? ಮಳೆ ಮಾಪನ ಕೇಂದ್ರದ ಒಂದರಲ್ಲಿ ಬಾಟಲಿ ಇಡಲಾಗುತ್ತದೆ. ಮಳೆಯಾದಾಗ ಬಾಟಲಿಯಲ್ಲಿ ಸಂಗ್ರಹವಾ ಗುವ ನೀರಿನ ಪ್ರಮಾಣ ಅಳೆಯುವ ಮೂಲಕ ಮಳೆಯ ಪ್ರಮಾಣವನ್ನು ತಿಳಿಯಲಾಗುತ್ತದೆ. ಇನ್ನೊಂದರಲ್ಲಿ ಮೀಟರ್ನ್ನು ಅಳವಡಿಸಲಾಗಿದ್ದು ಅದರಲ್ಲಿರುವ ಗ್ರಾಫ್ ಹಾಳೆಯಲ್ಲಿ ಮಳೆ ಪ್ರಮಾಣದ ಗುರುತು ಮಾಡಿ ಪ್ರಮಾಣ ತಿಳಿಸುತ್ತದೆ. ಎರಡು ಯಂತ್ರಗಳಿಂದ ಮಳೆ ಪ್ರಮಾಣದ ಮಾಹಿತಿ ಬರೆದಿಡಲಾಗುತ್ತದೆ. ಸುಮಾರು 40 ವರ್ಷಗಳ ಹಿಂದೆ ಸ್ವಯಂಚಾಲಿತ ಮಳೆ ಮಾಪನ ಕೇಂದ್ರಗಳನ್ನು ಅಳವಡಿಸಲಾಗಿದೆಯೇ ಹೊರತು ಅವು ಸುಸ್ಥಿತಿಯಲ್ಲಿವೆಯೋ, ಇಲ್ಲವೋ, ಅವು ನೀಡುತ್ತಿರುವ ಮಾಹಿತಿ ವೈಜ್ಞಾನಿಕವೇ ಎಂಬ ಬಗ್ಗೆ ಯಾರೊಬ್ಬರೂ ಪರಿಶೀಲನೆ ನಡೆಸುವ ಗೋಜಿಗೆ ಹೋಗಿಲ್ಲ.
ರೈತರಿಗೆ ಅನ್ಯಾಯ: ಮಳೆಯ ಪ್ರಮಾಣ ಮಾಪನ ಕೇಂದ್ರದಿಂದ ದೊರೆಯುತ್ತಿರುವ ಮಾಹಿತಿಯನ್ನೇ ಆಧಾರವಾಗಿಟ್ಟುಕೊಂಡು ಕೃಷಿ ಇಲಾಖೆ ಪ್ರತಿ ವರ್ಷ ರಾಜ್ಯಸರ್ಕಾರಕ್ಕೆ ಮಾಹಿತಿ ರವಾನಿಸುತ್ತಿದೆ. ಕೇಂದ್ರದ ಮಳೆ ಬಗ್ಗೆ ನೀಡುತ್ತಿರುವ ಮಾಹಿತಿ ವೈಜ್ಞಾನಿಕವೇ, ಅವೈಜ್ಞಾನಿಕವೇ ಎಂಬ ಬಗ್ಗೆ ಪರಿಶೀಲನೆ ನಡೆಸುವುದಕ್ಕೂ ಕೃಷಿ ಇಲಾಖೆ ಮುಂದಾಗದೆ ಯಥಾವತ್ತಾಗಿ ಕಳುಹಿ ಸುತ್ತಿದೆ. ಇದರಿಂದ ರೈತರಿಗೆ ವಂಚನೆಯಾಗುತ್ತಿದೆ. ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡುವ ಸಮಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಬಿದ್ದ ಮಳೆಯ ಪ್ರಮಾಣವನ್ನು ಪರಿಗಣಿಸಿ ಘೋಷಣೆ ಮಾಡು ತ್ತದೆ. ಆ ಸಮಯದಲ್ಲಿ ಮಳೆಯ ಪ್ರಮಾಣ ಕುರಿತು ತಪ್ಪು ಮಾಹಿತಿಗಳು ರವಾನೆಯಾದಾಗ ಬರಪೀಡಿತ ಜಿಲ್ಲೆಗಳ ರೈತರಿಗೆ ಸಿಗಬಹುದಾದ ಪರಿಹಾರವೂ ಕೈತಪ್ಪಿದಂತಾಗುತ್ತದೆ.