Advertisement

ಮಂಡ್ಯ: ಕಾರುಗಳ ನಡುವೆ ಭೀಕರ ಅಪಘಾತ, ಐದು ಮಂದಿ‌ ದುರ್ಮರಣ

11:34 PM Dec 11, 2022 | Team Udayavani |

ಮಂಡ್ಯ: ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

Advertisement

ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ತಮಿಳುನಾಡು ನೊಂದಣಿ ಹೊಂದಿದ್ದ ಸ್ವಿಫ್ಟ್ ಕಾರಿಗೆ ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್ ದಾಟಿ ಢಿಕ್ಕಿ ಹೊಡೆದ ಪರಿಣಾಮ ಐದು ಮಂದಿ ದುರ್ಮರಣ ಹೊಂದಿದ್ದಾರೆ.

ಎರಡು ಕಾರಿನಲ್ಲಿದ್ದ ಪೈಕಿ ನಾಲ್ಕು ಪುರುಷರು ಹಾಗು ಓರ್ವ ಮಹಿಳೆ ಸಾವನ್ನಪ್ಪಿದ್ದು, ಎರಡು ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರ ಹಾಗೂ ಗಾಯಾಳುಗಳ ವಿವರ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತರ ಮಾಹಿತಿ ಕಲೆ ಹಾಕುತ್ತಿದ್ದು, ಬಿಂಡಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಉಳ್ಳಾಲ: ಮಗನ ಕಣ್ಣೆದುರೇ ಸಮುದ್ರ ಪಾಲಾದ ತಂದೆ, ಸ್ನಾನಕ್ಕೆ ನೀರಿಗಿಳಿದ ವೇಳೆ ಸಂಭವಿಸಿದ ಘಟನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next