Advertisement

Mandya’s Keragodu ಘಟನೆ ಬಿಜೆಪಿಯವರ ಗುಪ್ತ ಕಾರ್ಯಸೂಚಿ: ಬಿ.ಕೆ.ಹರಿಪ್ರಸಾದ್

09:35 PM Jan 29, 2024 | Team Udayavani |
ಮಂಗಳೂರು: ಮಂಡ್ಯದ ಕೆರಗೋಡು ಘಟನೆ ಬಿಜೆಪಿಯವರ ಗುಪ್ತ ಕಾರ್ಯಸೂಚಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸೋಮವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನಾಗಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಯಲ್ಲಿ ಸುಮಾರು 52 ವರ್ಷಗಳ ಕಾಲ ರಾಷ್ಟ್ರಧ್ವಜ ಹಾರಿಸಿಲ್ಲ.ಕೆರಗೋಡಿನಲ್ಲಿ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಭಗವಾಧ್ವಜ ಹಾರಿಸಿ ಶಾಂತಿ ಕೆಡಿಸುವ ಪ್ರಯತ್ನ ಮಾಡಿದ್ದಾರೆ. ಸರಕಾರ ಕಠಿನ ಕ್ರಮ ತೆಗೆದು ಕೊಳ್ಳಬೇಕು. ಬಹುಸಂಖ್ಯಾತರನ್ನು ಓಲೈಕೆ ಮಾಡಲು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ ಎಂದರು.

Advertisement

ಜಗದೀಶ್ ಶೆಟ್ಟರ್ ಕಾಂಗ್ರೆಸ್ ತ್ಯಜಿಸಿದ ಬಗ್ಗೆ ಪ್ರತಿಕ್ರಿಯಿಸಿ, ಶೆಟ್ಟರ್ ಸೌಮ್ಯ ಸ್ವಭಾವದ ಜಂಟಲ್ ಮ್ಯಾನ್. ಅವರನ್ನು ಕಾಂಗ್ರೆಸ್ ನಲ್ಲಿ ಉಳಿಸಿಕೊಳ್ಳಬೇಕಿತ್ತು. ಅವರು ಬಿಟ್ಟು ಹೋಗಿರುವುದು ದೌರ್ಭಾಗ್ಯ. ಅವರಿಗೆ ಒಳ್ಳೆಯದಾಗಲಿ ಎಂದರು.ಆರ್. ಅಶೋಕ್ ಸಿಎಂ ಆಗಬೇಕೆಂದು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next