Advertisement

ಬಿಜೆಪಿ ಸೇರಿದ ಜೆಡಿಎಸ್ ರಾಜ್ಯ ಮಹಿಳಾ ಕಾರ್ಯಾಧ್ಯಕ್ಷೆ ಮಂಗಳಾದೇವಿ ಬಿರಾದಾರ

01:15 PM Apr 16, 2023 | Shreeram Nayak |

ಮುದ್ದೇಬಿಹಾಳ: ಜೆಡಿಎಸ್ ರಾಜ್ಯ ಮಹಿಳಾ ಕಾರ್ಯಾಧ್ಯಕ್ಷೆ, ರಾಜ್ಯದ ಪ್ರಭಾವಿ ನಾಯಕಿ, ಬಿಜೆಪಿಯಿಂದಲೇ ರಾಜಕೀಯ ಪ್ರವೇಶಿಸಿ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ 3-4 ಚುನಾವಣೆಗಳಲ್ಲಿ ಸ್ಪರ್ಧಿಸಿ ಬಿಜೆಪಿ ಬಲಿಷ್ಠವಾಗಿ ಸಂಘಟಿತವಾಗಲು ಕಾರಣರಾಗಿದ್ದ ಮಂಗಳಾದೇವಿ ಶಾಂತಗೌಡ್ರು ಬಿರಾದಾರ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

Advertisement

ತಮ್ಮ ಪತಿ ಶಾಂತಗೌಡ್ರು ಬಿರಾದಾರ, ಜೆಡಿಎಸ್ ನ ವಿಜಯಪುರ ಜಿಲ್ಲಾ ಮತ್ತು ಮುದ್ದೇಬಿಹಾಳ ತಾಲೂಕು ಘಟಕಗಳ ಕೆಲ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಬೆಂಬಲಿಗರೊಂದಿಗೆ ಜೆಡಿಎಸ್ ತೊರೆದು ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ ಅವರ ಜನಪರ, ಅಭಿವೃದ್ದಿಪರ ಕಾರ್ಯಗಳನ್ನು ಮೆಚ್ಚಿಕೊಂಡು ಸ್ವಯಂ ಪ್ರೇರಣೆಯಿಂದ ಬಿಜೆಪಿ ಸೇರ್ಪಡೆಗೊಂಡರು.

ಪಕ್ಷದ ಅಧ್ಯಕ್ಷರಾದ ನಳಿನಕುಮಾರ ಕಟೀಲ್, ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಗಳೂ ಆಗಿರುವ ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಪಿ.ಸಿ. ಮೋಹನ್, ಪಕ್ಷದ ರಾಜ್ಯ ಪದಾಧಿಕಾರಿಗಳು ಹಾಗೂ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಸಮ್ಮುಖ ಪಕ್ಷಕ್ಕೆ ಸ್ವಾಗತಿಸಿಕೊಳ್ಳಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next