Advertisement

ಇಂದು- ನಾಳೆ ಮಂಗಳೂರು-ಬೆಂಗಳೂರು ರೈಲು ಓಡಾಟ ಸ್ಥಗಿತ

11:42 AM Jul 20, 2019 | Team Udayavani |

ಸುಬ್ರಹ್ಮಣ್ಯ:  ಮಂಗಳೂರು – ಬೆಂಗಳೂರು ನಡುವಿನ ರೈಲು ಓಡಾಟವನ್ನು ಶನಿವಾರ ಮತ್ತು ರವಿವಾರ ಸ್ಥಗಿತಗೊಳಿಸಲಾಗಿದೆ.

Advertisement

ಶಿರಾಡಿ ಘಾಟ್‌ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ಇಲಾಖೆ ನಿರ್ಧರಿಸಿದೆ.

ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಅಪಾಯಕಾರಿ ಬಂಡೆ ಯಾವುದೇ ಕ್ಷಣದಲ್ಲಿ ರೈಲು ಹಳಿಯ ಮೇಲೆ ಉರುಳಿ ಬಿಳುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯ ಸಂಭವಿಸುವ ಮುನ್ನವೇ ರೈಲ್ವೇ ಇಲಾಖೆ ಎಚ್ಚೆತ್ತಿದ್ದು, ಬಂಡೆ ತೆರವಿಗೆ ಸಿದ್ದತೆ ನಡೆಸಿದೆ.

ಕಳೆದ ವರ್ಷ ಕುಸಿದಿತ್ತು
ಕಳೆದ ವರ್ಷದ ಮಳೆಗಾಲದಲ್ಲಿ ಭಾರಿ ಮಳೆಗೆ ಸುಬ್ರಹ್ಮಣ್ಯ – ಸಿರಿಬಾಗಿಲು ನಡುವಿನ ಕಿ.ಮೀ 86ರ ಹಳಿಯ ಮೇಲೆ ಭೂ ಕುಸಿತ ಸಂಭವಿಸಿ 110 ಮೀ ದೂರ, 25 ಮೀ. ಎತ್ತರಕ್ಕೆ ಮಣ್ಣು ಬಿದ್ದು, ಸುರಂಗದ ಪ್ರವೇಶ ದ್ವಾರ ಮಣ್ಣು ಮುಚ್ಚಿತ್ತು.

Advertisement

Udayavani is now on Telegram. Click here to join our channel and stay updated with the latest news.

Next