Advertisement

Mangalore- Bangalore Trains; ನಿರಂತರ ಮಣ್ಣು ಕುಸಿತದಿಂದ ಕಾರ್ಯಾಚರಣೆಗೆ ಹಿನ್ನಡೆ

11:49 PM Aug 12, 2024 | Team Udayavani |

ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಸಮೀಪದ ಆಚಂಗಿ ವ್ಯಾಪ್ತಿಯಲ್ಲಿ ಹಳಿಗೆ ಬಿದ್ದಿರುವ ಮಣ್ಣನ್ನು ತೆರವು ಮಾಡುವ ಕಾರ್ಯ ಮುಂದುವರಿದಿದೆ. ಆದರೆ ಮತ್ತಷ್ಟು ಮಣ್ಣು ಕುಸಿಯುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

Advertisement

ಆ.10ರ ಮುಂಜಾನೆ ವೇಳೆ ಹಳಿಗೆ ಮಣ್ಣು ಕುಸಿದಿತ್ತು. ಶನಿವಾರ ಆರಂಭಗೊಂಡಿರುವ ಮಣ್ಣು ತೆರವು ಕಾರ್ಯ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿರುವಾಗ ಮತ್ತೆ ಮತ್ತೆ ಮಣ್ಣು ಕುಸಿಯುತ್ತಿದೆ.

ಸಕಲೇಶಪುರ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಸಂಭವಿಸಿದ ಸ್ಥಳ ಅಪಾಯಕಾರಿಯಾಗಿದೆ. ಇನ್ನಷ್ಟು ಮೇಲಿನಿಂದ ಬಂಡೆ ಸಮೇತ ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಕೆಲಸ ನಿರ್ವಹಿಸಲೂ ಹೆದರುವಂತಾಗಿದೆ. ಆದ್ದರಿಂದ ಮಣ್ಣು ತೆರವು ಕಾರ್ಯಾಚರಣೆ ಇನ್ನೂ ಕೆಲವು ದಿನ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next