Advertisement

ಆಡಿಯೋ ಧ್ವನಿ ಯಾರದ್ದು; ಮಂಗಳೂರಿನಲ್ಲಿ ಕುಮಾರಸ್ವಾಮಿ ಹೇಳಿದ್ದೇನು?

08:41 AM Feb 09, 2019 | Team Udayavani |

ಮಂಗಳೂರು:ಬಜೆಟ್ ಮಂಡನೆಗೂ ಮುನ್ನ ಸಿಎಂ ಕುಮಾರಸ್ವಾಮಿ ಅವರು ಆಪರೇಷನ್ ಕಮಲದ ಕುರಿತ ಆಡಿಯೋ ಬಿಡುಗಡೆ ಮಾಡಿದ ವಿಚಾರ ಈಗ ಆರೋಪ, ಪ್ರತ್ಯಾರೋಪಕ್ಕೆ ನಾಂದಿ ಹಾಡಿದೆ. ಏತನ್ಮಧ್ಯೆ ಆಡಿಯೋದಲ್ಲಿ ಮಾತನಾಡಿದ್ದು ಬಿಎಸ್ ವೈ ಅಂತ ನಾನು ಹೇಳಿಲ್ಲ ಎಂಬುದಾಗಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಧರ್ಮಸ್ಥಳಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನಿನ್ನೆ ಬಿಡುಗಡೆ ಮಾಡಿರುವ ಆಡಿಯೋದಲ್ಲಿರುವ ಧ್ವನಿ ಯಾರದ್ದು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ ಎಂದರು.

ಆಡಿಯೋದಲ್ಲಿ ಮಾತನಾಡಿದ್ದು ಯಾರು ಎಂಬುದು ತನಿಖೆ ನಡೆದಾಗಲೇ ಗೊತ್ತಾಗುತ್ತದೆ. ಆಡಿಯೋದಲ್ಲಿ ಸ್ಪೀಕರ್ ರಮೇಶ್ ಕುಮಾರ್, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಗೌರವಾನ್ವಿತ ಸುಪ್ರೀಂಕೋರ್ಟ್, ಹೈಕೋರ್ಟ್ ಬಗ್ಗೆ ಪ್ರಸ್ತಾಪಿಸಲಾಗಿದೆ. ಹೀಗಾಗಿ ಆಡಿಯೋ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next