Advertisement

ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ : ಮಂಗಳೂರಿನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

02:35 PM Dec 26, 2021 | Team Udayavani |

ಮಂಗಳೂರು: ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

Advertisement

ಸೌರವ್ ಎನ್ನುವ ಬಿಹಾರದ ಜಮುಯಿ ಜಿಲ್ಲೆಯ ಓರೈಯಾ ಗ್ರಾಮದ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಸೌರವ್(19) ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದೆ. ಕೆಲಸ ಸಿಗುತ್ತದೆಯೋ ಗೊತ್ತಿಲ್ಲ, ಸಾಲ ಮಾಡಿ ಶಿಕ್ಷಣ ಮಾಡುತ್ತಿದ್ದೇನೆ ಎಂದು ತಂದೆ ಸುರೇಶ್ ಪ್ರಸಾದ್ಗೆ ತಿಳಿಸುವಂತೆ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಹೇಳಿದ್ದಾರೆ.

ಬೆಳಗ್ಗೆ 8 ಗಂಟೆಯ ವೇಳೆಗೆ ಬಾಗಿಲು ತೆಗೆಯದ ಹಿನ್ನಲೆಯಲ್ಲಿ , 9.30  ರ ವೇಳೆ ಕಿಟಕಿಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಆದರೆ ಪೋಷಕರು, ನಾವು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದು, ಬರಲು ಕಷ್ಟವಾಗುತ್ತದೆ. ಅಲ್ಲಿಯೇ ಅಂತ್ಯಕ್ರಿಯೆ ಮಾಡಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಹತ್ತನೇ ತರಗತಿಯಲ್ಲಿ ಇರುವಾಗಲೂ ಸೌರವ್ ಆತ್ಮಹತ್ಯೆ ಯತ್ನ ಮಾಡಿದ್ದ ಎಂದು ತಿಳಿದು ಬಂದಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಹೇಳಿದ್ದಾರೆ.

ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಹಕಾರದಿಂದ ಪೋಷಕರನ್ನು ಕರೆಸಿಕೊಂಡು ಮೃತದೇಹವನ್ನ ಪಾಟ್ನಾ ಗೆ ತೆಗೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next