Advertisement

ಭಟ್ಕಳ ಸಮೀಪ ಮಂಗಳೂರು ಮೂಲದ ಬೋಟ್ ಮುಳುಗಡೆ

10:31 AM Sep 09, 2019 | Team Udayavani |

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮಂಗಳೂರು ಮೂಲದ ಬೋಟ್ ಒಂದು ಭಟ್ಕಳ-ಮುರುಡೇಶ್ವರ ಸಮೀಪದ ನೇತ್ರಾಣಿ ಗುಡ್ಡದ ಸಮೀಪ ಸುಮದ್ರದಲ್ಲಿ  ಮುಳುಗಡೆಯಾದ ಘಟನೆ ಸಂಭವಿಸಿದೆ.

Advertisement

ಮುಳುಗಡೆಯಾದ ಈ ಮೀನುಗಾರಿಕಾ ಬೋಟ್ ಮಂಗಳೂರಿನ ಕಸ್ಬಾ ಬೆಂಗ್ರೆಯ ಮೊಹಮ್ಮದ್ ಆಶೀಫ್ ಎಂಬುವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

ಸೆಪ್ಟೆಂಬರ್ 2 ರಂದು ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆಯಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲಾ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಮೀನುಗಾರಿಕಾ ಬೋಟ್ ಮುಳುಗಡೆಯಾಗಿರುವುದರಿಂದ ಒಟ್ಟಾರೆ ಅಂದಾಜು 85 ಲಕ್ಷ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next