Advertisement

ಮಂಗಳೂರು ಬೋಟ್ ದುರಂತ: ಇಬ್ಬರ ಮೃತದೇಹ ಪತ್ತೆ, ಇನ್ನೂ ಇಬ್ಬರಿಗಾಗಿ ಹುಡುಕಾಟ

12:15 PM Dec 02, 2020 | keerthan |

ಮಂಗಳೂರು: ಮೀನುಗಾರಿಕಾ ಬೋಟ್ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಇಂದು ಇಬ್ಬರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ನಾಲ್ಕು ಜನರ ಮೃತದೇಹ ಪತ್ತೆಯಾದಂತಾಗಿದೆ.

Advertisement

ಬೊಕ್ಕಪಟ್ಣ ನಿವಾಸಿ ಚಿಂತನ್ (21) ಮತ್ತು ಕಸ್ಬಾ ಬೆಂಗ್ರೆ ನಿವಾಸಿ ಹಸೈನಾರ್ (25) ಅವರ ಮೃತದೇಹ ಇಂದು ಪತ್ತೆಯಾಗಿದೆ. ಬೊಕ್ಕಪಟ್ಣ ಬೆಂಗ್ರೆಯ ಪಾಂಡುರಂಗ ಸುವರ್ಣ (58) ಮತ್ತು ಪ್ರೀತಂ (25) ಅವರ ಮೃತದೇಹ ಮಂಗಳವಾರ ಪತ್ತೆಯಾಗಿತ್ತು.

ಸೋಮವಾರ ರಾತ್ರಿ ನಡೆದ ಬೋಟ್ ಮುಳುಗಡೆ ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. ಕಸ್ಬಾ ಬೆಂಗ್ರೆಯ ಅನ್ಸಾರ್ (31) ಮತ್ತು ಜಿಯಾವುಲ್ಲಾ (32) ಅವರಿಗಾಗಿ ಇನ್ನೂ ಶೋಧ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ:ಮಂಗಳೂರು ಬೋಟ್ ದುರಂತ: ಮತ್ತೋರ್ವ ಮೀನುಗಾರನ ಮೃತದೇಹ ಪತ್ತೆ

Advertisement

ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.  ಮೀನುಗಾರಿಕಾ ಬೋಟ್ ದುರಂತದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಧ್ಯಾಹ್ನ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಮೀನುಗಾರಿಕೆಗಾಗಿ ನಗರದ ಬಂದರಿನಿಂದ ತೆರಳಿದ್ದ ‘ಶ್ರೀ ರಕ್ಷಾ’ ಎಂಬ ಹೆಸರಿನ ಪರ್ಸೀನ್‌ ಬೋಟ್‌ ಸೋಮವಾರ ರಾತ್ರಿ ಅರಬಿ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಬೋಟ್‌ ನಲ್ಲಿ ಒಟ್ಟು 25 ಮಂದಿ ತೆರಳಿದ್ದು, 19 ಮಂದಿ ಪಾರಾಗಿದ್ದಾರೆ.

ನಾಪತ್ತೆಯಾದವರನ್ನು ಶೀಘ್ರವಾಗಿ ಪತ್ತೆ ಮಾಡಬೇಕು. ಉಳಿದ ನಾಲ್ವರು ಪತ್ತೆಯಾಗುವವರೆಗೆ ಮೀನು ವ್ಯವಹಾರ ಮಾಡುವುದಿಲ್ಲ ಎಂದು ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next