Advertisement

ಮಂಗಳೂರಿನಲ್ಲಿ ಪರ್ಯಾಯ ವ್ಯಾಜ್ಯ ಪರಿಹಾರ ಕೇಂದ್ರ ಸ್ಥಾಪನೆ: ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್

06:19 PM Oct 17, 2019 | Team Udayavani |

ಮಂಗಳೂರು : ಕೈಗಾರಿಕೆ ಮತ್ತು ವಾಣಿಜ್ಯ ವ್ಯವಹಾರಗಳ ವಿವಾದ ಪರಿಹಾರಕ್ಕಾಗಿ ಸುಸಜ್ಜಿತವಾದ ಪರ್ಯಾಯ ವ್ಯಾಜ್ಯ ಪರಿಹಾರ (ಎಡಿಆರ್) ಕೇಂದ್ರವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಕೆನರಾ ಛೇಂಬರ್ ಆಫ್ ಕಾಮರ್ಸ್ಆ್ಯಂ ಡ್ ಇಂಡಸ್ಟ್ರಿ (ಕೆಸಿಸಿಐ) ಸರಕಾರಿ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದೆ ಎಂದು ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್ ತಿಳಿಸಿದರು.

Advertisement

ಕೆಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಗುರುವಾರದಂದು ನಗರದಲ್ಲಿ ಪ್ರಥಮ ಪತ್ರಿಕಾಗೋಷ್ಠಿ ನಡೆಸಿದ ಅವರು ತನ್ನ ಅಧಿಕಾರ ಅವಧಿಯಲ್ಲಿ ಕೈಗೊಳ್ಳಲು ಉದ್ದೇಶಿಸಿದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸರಕಾರದ ಹೊಸ ನೀತಿಯು ವಾಣಿಜ್ಯ ವಿವಾದಗಳಿಗೆ ಸಂಬಂಧಿಸಿ ಪರ್ಯಾಯ ವ್ಯಾಜ್ಯ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲು ಉತ್ತೇಜನ ನೀಡುತ್ತದೆ. ಹಾಗಾಗಿ ಕೆಸಿಸಿಐ ಮಂಗಳೂರಿನಲ್ಲಿ ಎಡಿಆರ್ ಸ್ಥಾಪಿಸಲು ಉದ್ದೇಶಿಸಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆಸಿಸಿಐ ಗೌರವ ಕಾರ್ಯದರ್ಶಿ ನಿಸಾರ್ ಫಕೀರ್ ಮಹಮದ್ , ಉಪಾಧ್ಯಕ್ಷ ಶಶಿಧರ್  ಪೈ ಮಾರೂರು, ಕಾರ್ಯದರ್ಶಿ ದಿವಾಕರ್ ಪೈ, ಕೋಶಾಧಿಕಾರಿ ಎಂ. ಗಣೇಶ್ ಕಾಮತ್  ಮೊದಲಾದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next