Advertisement

ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ

04:45 PM Oct 03, 2020 | keerthan |

ಮಂಗಳೂರು: ಡ್ಯಾನ್ಸರ್ ಕಿಶೋರ್ ಅಮನ್ ಬಂಧನದಿಂದ ಆರಂಭವಾಗಿದ್ದ ಡ್ರಗ್ ಜಾಲ ಪ್ರಕರಣದ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರ ವರ್ಗಾವಣೆ ಆದೇಶವನ್ನು ತಡೆಹಿಡಿಯಲಾಗಿದೆ.

Advertisement

ಕಿಶೋರ್ ಅಮನ್ ಬಂಧನ ಬಳಿಕ ನಿರೂಪಕಿ ಅನುಶ್ರೀಗೂ ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದರು. ಅನುಶ್ರೀ ಪ್ರಕರಣದಲ್ಲಿ ರಾಜಕೀಯ ವ್ಯಕ್ತಿಗಳ ಕೈವಾಡದ ಬಗ್ಗೆ ಮಾಹಿತಿ ಹೊರಬೀಳುತ್ತಿದ್ದಂತೆ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ:ಟಾಟಾ ಏಸ್‌-ಬೊಲೇರೋ ಭೀಕರ ಅಪಘಾತ :6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಶಿವಪ್ರಕಾಶ್ ವರ್ಗಾವಣೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ಕೇಳಿಬಂದಿತ್ತು. ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನಲೆಯಲ್ಲಿ ವರ್ಗಾವಣೆ ಆದೇಶವನ್ನು ತಡೆಹಿಡಿಯಲಾಗಿದೆ. ಶಿವಪ್ರಕಾಶ್ ಅವರೇ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಮುಂದುವರಿಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next