Advertisement

ಬಿಜೆಪಿ ಸರಕಾರದಲ್ಲಿ ವಿರೋಧ ಪಕ್ಷ ನಾಯಕರಿಗೆ ರಕ್ಷಣೆ ಇಲ್ಲದಾಗಿದೆ : ಹರೀಶ್ ಕುಮಾರ್

08:31 AM Jan 30, 2020 | Naveen |

ಮಂಗಳೂರು: ಸರಕಾರದ ನೀತಿಗಳನ್ನು ವಿರೋಧಿಸಿದರೆ ದೇಶದ್ರೋಹಿ ಆಗುತ್ತೇವೆ. ವಿರೋಧ ಪಕ್ಷಗಳ ಮುಖಂಡರಿಗೆ ಮುಂಬೈನಿಂದ ಕೊಲೆ ಬೆದರಿಕೆ ಬರುತ್ತಿದೆ. ಬಿಜೆಪಿ ಸರಕಾರದಲ್ಲಿ ವಿರೋಧ ಪಕ್ಷಗಳ ನಾಯಕರಿಗೆ ರಕ್ಷಣೆ ಇಲ್ಲದಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು.

Advertisement

ಮಾಜಿ ಸಚಿವ ಯು.ಟಿ ಖಾದರ್ ವಿರುದ್ಧ ಕೊಲೆ ಬೆದರಿಕೆ ವಿಚಾರವಾಗಿ ಬುಧವಾರದಂದು ಅವರು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಹಿಂದೆ ರಮಾನಾಥ ರೈ ವಿರುದ್ಧವೂ ಇಂಥ ಬೆದರಿಕೆ ಬಂದಿತ್ತು. ಬೆದರಿಕೆ ಹಾಕಿದವರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು. ಇಲ್ಲದಿದ್ದರೆ ಕಮಿಷನರ್ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next