Advertisement

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ; ಆತ್ಮಹತ್ಯೆ ಶಂಕೆ

12:30 PM Oct 10, 2022 | Team Udayavani |

ಮಂಗಳೂರು: ಮನೆಯಲ್ಲೇ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯ ಮರೋಳಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ.

Advertisement

ಮಲ್ಲಿಕಾರ್ಜುನ ಮತ್ತು ಸೌಮ್ಯ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಸೌಮ್ಯ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿಯಾಗಿದ್ದು, ಮಲ್ಲಿಕಾರ್ಜುನ ಮೂಲತಃ ಬೆಳಗಾವಿಯವರಾಗಿದ್ದಾರೆ. ಮಲ್ಲಿಕಾರ್ಜುನ ವೆಬ್ ಡಿಸೈನರ್‌ ಆಗಿದ್ದರು. ಸೌಮ್ಯ ಐಟಿಐ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ದಂಪತಿಗಳು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಕಂಕನಾಡಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next