Advertisement

ಪ್ರೇಮಿಗಳ ದಿನದಂದು ಅಹಿತಕರ ಘಟನೆಗೆ ಆಸ್ಪದವಾಗದಂತೆ ಅಗತ್ಯ ಕ್ರಮ: ಮಂಗಳೂರು ಡಿಸಿಪಿ

11:59 AM Feb 13, 2021 | Team Udayavani |

ಮಂಗಳೂರು: ಪ್ರೇಮಿಗಳ ದಿನಾಚರಣೆಯ ದಿನದಂದು ( ಫೆ.14) ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Advertisement

ವ್ಯಾಲಂಟೈನ್ಸ್ ಡೇ ಆಚರಣೆಗೆ ವಿರೋಧ ವ್ಯಕ್ತಪಡಿಸುವ ಕುರಿತಾದ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತಿರುವ ಹಿನ್ನಲೆಯಲ್ಲಿ ಡಿಸಿಪಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳ ಬಳಕೆ- ಶಿಷ್ಟಾಚಾರವಿರಲಿ

ಪ್ರೇಮಿಗಳ ದಿನಾಚರಣೆ ಮಾಡಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ ಓರ್ವನನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಯಿಸಿ ಎಚ್ಚರಿಕೆ ನೀಡಿಲಾಗಿದೆ. ಇತರ ಹಲವರನ್ನು ಠಾಣೆಗೆ ಕರೆಸಿ ಸಭೆ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ಕಂಟೈನರ್ ಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಸಾವು

Advertisement

ಫೆ.14ರಂದು ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತೇವೆ. ರಾಣಿ ಅಬ್ಬಕ್ಕ ಪಡೆಯು ನಿರಂತರ ಗಸ್ತಿನಲ್ಲಿರುತ್ತದೆ ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next