Advertisement

ಮಂಗಳೂರು: ನಿರ್ದಿಷ್ಟ ಸಮುದಾಯವನ್ನು ವಿನಾ ಕಾರಣ ಗುರಿ ಮಾಡದಿರಿ: ಮಿಥುನ್ ರೈ

09:47 AM Jan 26, 2020 | Naveen |

ಮಂಗಳೂರು: ಮಂಗಳೂರು ಏರ್ ಪೋರ್ಟ್ ನಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಸಂದರ್ಭದಲ್ಲಿ ಕೆಲ ಸಚಿವರು ಮತ್ತು ಬಿಜೆಪಿ ಮುಖಂಡರು ನಿರ್ದಿಷ್ಟ ಸಮುದಾಯವನ್ನು ನಿಂದಿಸಿದ್ದಾರೆ. ಆರೋಪಿಯ ಪತ್ತೆಯಾದೊಡನೆ ಈ ನಾಯಕರು ತದ್ವಿರುದ್ಧ ಹೇಳಿಕೆ ನೀಡತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣಕ್ಕೆ ಸಂಬಂಧಿಸಿ ನಿರ್ದಿಷ್ಟ ಸಮುದಾಯವನ್ನು ವಿನಾ ಕಾರಣ ಗುರಿ ಮಾಡುವುದನ್ನು ಮುಂದುವರಿಸಿದರೆ ಅಂತಹ ಸಚಿವರು, ಬಿಜೆಪಿ ಮುಖಂಡರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.

Advertisement

ಮಂಗಳೂರು ಏರ್ ಪೋರ್ಟ್ ನಲ್ಲಿ ಸ್ಫೋಟಕ ಪತ್ತೆ ಪ್ರಕರಣ ಕುರಿತು ಅವರು ಶನಿವಾರದಂದು  ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಬಿಜೆಪಿಗರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಸೂಕ್ತ ಕ್ರಮ ಜರುಗಿಸಲಿ. ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮುಗಲಭೆ ಪೀಡಿತ ಪ್ರದೇಶವನ್ನಾಗಿಸಲು ಬಿಡುವುದಿಲ್ಲ. ಬಿಜೆಪಿಗರ ಈ ಷಡ್ಯಂತ್ರದ ವಿರುದ್ಧ ಯುವ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next