Advertisement

ಮಂಗಳೂರು:ಪಚ್ಚನಾಡಿ ಡಂಪಿಂಗ್ ಯಾರ್ಡ್ ಪರಿಸರಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ, ಪರಿಶೀಲನೆ

02:08 PM Jan 29, 2020 | Team Udayavani |

ಮಂಗಳೂರು: ಪಚ್ಚನಾಡಿಯಲ್ಲಿರುವ ತ್ಯಾಜ್ಯ ಡಂಪಿಂಗ್ ಯಾರ್ಡ್ ನಲ್ಲಿ ಆಗಿರುವ ಅವ್ಯವಸ್ಥೆಯನ್ನು ಸರಿಪಡಿಸಿ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಮುಂದಾಗಿದ್ದು ಬುಧವಾರ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಮ್ ವಿಜಯಭಾಸ್ಕರ್ ಅವರು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರ ಜೊತೆಗೂಡಿ ಪಚ್ಚನಾಡಿ ಡಂಪಿಂಗ್ ಯಾರ್ಡ್ ಪರಿಸರಕ್ಕೆ ಭೇಟಿ ಪರಿಸ್ಥಿತಿಯನ್ನು ಅವಲೋಕಿಸಿದರು.

Advertisement

ಈ ಸಂದರ್ಭದಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಸಹಿತ ಜಿಲ್ಲಾಡಳಿತದ ಅನೇಕ ಅಧಿಕಾರಿಗಳು, ಸ್ಥಳೀಯ ಪ್ರಮುಖರಾದ ಸಂದೀಪ್ ಪಚ್ಚನಾಡಿ, ರವೀಂದ್ರ ಕುಡುಪು, ಸುಜನ್ ದಾಸ್, ಪಾಲಿಕೆ ಸದಸ್ಯೆ ಸಂಗೀತಾ, ಬಿಜೆಪಿ ಮಂಗಳೂರು ಉತ್ತರ ಮಂಡಲ ಕಾರ್ಯದರ್ಶಿ ಭರತರಾಜ್ ಕೃಷ್ಣಾಪುರ ಸಹಿತ ಅನೇಕ ನಾಗರಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next