Advertisement

ಮಂಗಳೂರು: ಗ್ರಾಮ ಪಂಚಾಯತ್ ಮಟ್ಟದಲ್ಲೇ ಸಿಎಎ ಕುರಿತು ಗೊಂದಲ ನಿವಾರಿಸಲಿ: ಯು.ಟಿ.ಖಾದರ್

09:50 AM Jan 17, 2020 | Naveen |

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದೇಶದಲ್ಲಿ ಈಗ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಲಿ. ಪ್ರತಿ ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗೃಹಸಚಿವರು ಗೊಂದಲ ನಿವಾರಿಸಲಿ. ಮುಖ್ಯಮಂತ್ರಿಗಳು ರಾಜ್ಯದ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.

Advertisement

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅವರು ಗುರುವಾರದಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮನೆ ಮನೆಯಲ್ಲಿ ಆಶಾ ಕಾರ್ಯಕರ್ತೆಯರು ಹೋದಾಗ ಗೊಂದಲ ಸೃಷ್ಟಿಯಾಗುತ್ತಿದೆ. ಜನರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಗೊಂದಲ ಸೃಷ್ಟಿಯಾಗಿದೆ. ಸರ್ಕಾರ, ಆಡಳಿತ ಮಂಡಳಿಗಳು, ಪತ್ರಕರ್ತರು ಅರಿವು ಮೂಡಿಸಬೇಕಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲೇ ಈ ಜಾಗೃತಿ ನಡೆಯಬೇಕಾಗಿದೆ ಎಂದು  ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next