Advertisement

ಮಂಗಳೂರು: ಟಿಕೆಟ್ ಗಾಗಿ 10 ಲಕ್ಷ ರೂ. ಲಂಚ ಪಡೆದಿದ್ದೇನೆ ಎಂಬುದು ಸುಳ್ಳು; ಮೊಯ್ದಿನ್ ಬಾವಾ

04:40 PM Nov 01, 2019 | Naveen |

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ನನಗೆ ಕಪಾಳಮೋಕ್ಷವಾಗಿರುವುದು ನಿಜ. ಇದಕ್ಕೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲಾಗಿದ್ದು, ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಹೇಳಿದರು.

Advertisement

ನಗರದಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪಾಲಿಕೆ ಚುನಾವಣೆಗೆ ಟಿಕೆಟ್ ಕೊಡಿಸುವುದಕ್ಕಾಗಿ 10 ಲಕ್ಷ ರೂ. ಲಂಚ ಪಡೆದಿದ್ದೇನೆ ಎಂಬ ಆರೋಪ ಸುಳ್ಳು ಎಂದು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಬುಧವಾರ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಅಸಮಾಧಾನ ಸ್ಫೋಟದ್ದು, ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ಅವರ ಮೇಲೆ ಮಾಜಿ ಮೇಯರ್ ಗುಲ್ಜಾರ್‌ಬಾನು ಅವರ ಸಂಬಂಧಿಕರು ಎನ್ನಲಾದ ಕೆಲವರು ಮಂಗಳೂರಿನ ಖಾಸಗಿ ಹೊಟೆಲ್ ಎದುರು ಹಲ್ಲೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next