Advertisement

ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

01:39 PM Dec 08, 2021 | Team Udayavani |

ಮಂಗಳೂರು: ನಗರದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

Advertisement

ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪತಿ ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮೀ (26) ಮಕ್ಕಳಾದ ಸಪ್ನಾ( 8) ಮತ್ತು ಸಮರ್ಥ್ (4) ಸಾವನ್ನಪ್ಪಿದವರು.

ನಾಗೇಶ್ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಮತ್ತು ಮಕ್ಕಳ ಶವಗಳು ವಿಷ ಸೇವಿಸಿ ಸಾವನ್ನಪ್ಪಿದ ರೀತಿಯಲ್ಲಿ ,ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಜಯಲಕ್ಷ್ಮಿ ಮತ್ತು ಮಕ್ಕಳು ಬಾಗಲಕೋಟದ ಬೀಳಗಿ ತಾಲ್ಲೂಕಿನ ಸುನಗ ಗ್ರಾಮದವರು ಎಂದು ತಿಳಿದು ಬಂದಿದೆ.

Advertisement

ನಾಗೇಶ್ ಚಾಲಕನಾಗಿದ್ದು, ವಿಜಯಲಕ್ಷ್ಮೀ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಳು ಎಂದು ಪ್ರಾಥಮಿಕ ವಿವರಗಳು ಲಭ್ಯವಾಗಿವೆ.

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next